ಡಿಕೆಶಿ ನಿವಾಸದ ಮೇಲೆ ದಾಳಿಗೆ ಖಂಡನೆ. ನಾಳೆ ಬೆಳಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆಗೆ ನಿರ್ಧಾರ.
ಉಡುಪಿ : ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಮನೆ ಮೇಲಿನ ಸಿಬಿಐ ದಾಳಿ ಖಂಡಿಸಿ ಅಕ್ಟೋಬರ್ 6ರಂದು ಕಾಂಗ್ರೆಸ್ ನ ವಿವಿಧ ಘಟಕದವರು ಪ್ರತಿಭಟನೆ ಆಯೋಜಿಸಿದ್ದಾರೆ.
ಇಂದು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ತುರ್ತು ಸಭೆ ನಡೆಸಿದ ಕಾಂಗ್ರೆಸ್ಸಿಗರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್, ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ವಿದ್ಯಾರ್ಥಿ ಘಟಕ ಸಂಘಟನೆಗಳೊಂದಿಗೆ ಅಕ್ಟೋಬರ್ ಆರರಂದು ಬೆಳಿಗ್ಗೆ 10-30ಕ್ಕೆ ಪ್ರತಿಭಟಿಸಲಿದ್ದಾರೆ.