ಕುಮಟಾ: ಇತ್ತೀಚಿಗೆ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಅಂಕಣಕಾರ ವಿ.ಆರ್.ಜೋಷಿ ಅವರಿಗೆ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರು ಬುಧವಾರ ಸಭೆ ನಡೆಸಿ, ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಜೋಷಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಕ.ಸಾ.ಪ ಜಿಲ್ಲಾಧ್ಯಕ್ಷ ಅರವಿಂದ ಕರ್ಕಿಕೋಡಿ ಈ ವೇಳೆ ಮಾತನಾಡಿ, ‘ವಿ.ಆರ್ ಜೋಷಿಯವರು ಪತ್ರಿಕೋದ್ಯಮದಲ್ಲಿ ಹೊಸತನದ ಬರವಣಿಗೆ ತಂದವರು. ಕೇವಲ ಸುದ್ದಿ ಮಾಡುವುದಷ್ಟೇ ಅಲ್ಲದೇ, ಓದುಗರಿಗೆ ಒಳ್ಳೆಯ ಸಂದೇಶ ನೀಡುವ ನಿಟ್ಟಿನಲ್ಲಿ ಸುದ್ದಿ ಮಾಡುತ್ತಿದ್ದರು. ಅವರ ವೃತ್ತಿ ನಿಷ್ಠೆ ಹಾಗೂ ವೃತ್ತಿ ಶೈಲಿಯನ್ನು ಯುವ ಪತ್ರಕರ್ತರು ಅಳವಡಿಸಿಕೊಳ್ಳಬೇಕು’ ಎಂದರು.
ಪತ್ರಕರ್ತರಾದ ಅನ್ಸಾರ್ ಶೇಖ್, ಸುಬ್ರಾಯ ಭಟ್ಟ ಮಾತನಾಡಿ, ಜೋಷಿಯವರೊಂದಿಗಿನ ಒಡನಾಟದ ನೆನಪುಗಳನ್ನು ಮೆಲುಕು ಹಾಕಿದರು. ಕಸಾಪ ತಾಲೂಕಾಧÀ್ಯಕ್ಷ ಶ್ರೀಧರ ಉಪ್ಪಿನಗಣಪತಿ, ಪತ್ರಕರ್ತರಾದ ಗಣೇಶ ರಾವ್, ಶಂಕರ ಶರ್ಮಾ, ಸದಾನಂದ ದೇಶಭಂಡಾರಿ, ರಾಘು ಶೇಟ್, ರವಿಗಾವಡಿ, ದಿನೇಶ ಗಾಂವಕರ್, ಮಂಜು ದೀವಗಿ, ಯೋಗಿಶ ಮಡಿವಾಳ್, ನಟರಾಜ ಗದ್ದೆಮನೆ, ಸಂತೋಷ ನಾಯ್ಕ, ಚಂದ್ರಕಾಂತ ನಾಯ್ಕ, ಸಂಘದ ಸದಸ್ಯರಾದ ಕುಮಾರ್ ವೆಂಗರ್ಲೇಕರ್, ವಿನೋದ ಹರಿಕಂತ್ರ, ಸಂತೋಷ್ ನಾಯ್ಕ ಮುಂತಾದವರು ಹಾಜರಿದ್ದರು.
Read These Next
ರೈಲಿನಡಿ ಆತ್ಮಹತ್ಯೆ ಮಾಡಿಕೊಂಡ ಅಪರಿಚಿತ ವ್ಯಕ್ತಿ
ಭಟ್ಕಳ: ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತೆರ್ನಮಕ್ಕಿಯಲ್ಲಿ ...
ಭಟ್ಕಳದ ಶಮ್ಸುದ್ಧೀನ್ ವೃತ್ತದ ಬಳಿ ರಸ್ತೆ ಅಪಘಾತ; ಆಟೋ ರಿಕ್ಷಾ ಚಾಲಕ ಗಂಭೀರ
ಭಟ್ಕಳ: ಭಟ್ಕಳದ ಹೃದಯಭಾಗವಾಗಿರುವ ಶಂಶುದ್ದೀನ್ ವೃತ್ತದ ಬಳಿ ಖಾಸಗಿ ಬಸ್ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ ಆಟೋ ಚಾಲಕ ಗಂಭೀರವಾಗಿ ...
ಹೊನ್ನಾವರ: ಕಾಸರಕೋಡು ಬಂದರು ನಿರ್ಮಾಣಕ್ಕೆ ಸಹಕರಿಸಿ : ಜಿಲ್ಲಾಧಿಕಾರಿ
ಕಾಸರಕೋಡುನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಂದರು ಕಾಮಗಾರಿಗೆ ಅಗತ್ಯವಿರುವ ಸರ್ವೇ ಕಾರ್ಯವನ್ನು ಈ ತಿಂಗಳಲ್ಲಿ ...
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಜಿಲ್ಲೆಯಲ್ಲಿ ಗರಿಷ್ಠ ಮತದಾನದ ಉದ್ದೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಭಟ್ಕಳದ ತಂಝೀಮ್ ವತಿಯಿಂದ ಮಾರ್ಚ್ 30 ಮತ್ತು 31 ರಂದು ಮೆಗಾ ವೋಟರ್ ಐಡಿ ಶಿಬಿರ
ಭಟ್ಕಳ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅರ್ಹ ಮತದಾರರನ್ನು ನೋಂದಾಯಿಸಲು ಮತ್ತು ಮತದಾರರ ಗುರುತಿನ ಚೀಟಿ ನೀಡಲು ಭಟ್ಕಳದ ...