ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

Source: SOnews | By Staff Correspondent | Published on 3rd May 2024, 6:41 PM | Coastal News |

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದೆ.

ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರ ಪುತ್ರಿ ಬೀನಾ ವೈದ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಭಟ್ಕಳದ ಮುರುಡೇಶ್ವರದಿಂದ ಮಧ್ಯಾಹ್ನ ಹೊರಟಿತ್ತು. ಸಹಸ್ರಾರು ಸಂಖ್ಯೆಯ ಮಂಕಾಳ ವೈದ್ಯರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು, ಡಾ.ಅಂಜಲಿ ನಿಂಬಾಳ್ಕರ್ ಅವರ ಅಭಿಮಾನಿಗಳು ಬೀನಾ ವೈದ್ಯ ನೇತೃತ್ವದೊಂದಿಗೆ ಗೇರುಸೊಪ್ಪ ವೃತ್ತಕ್ಕೆ ಆಗಮಿಸಿದರು. 

ಅಲ್ಲಿಂದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಬೀನಾ ವೈದ್ಯರೊಂದಿಗೆ ತೆರೆದ ವಾಹನದಲ್ಲಿ ನಿಂತು ಬೈಕ್ ಸವಾರರೊಂದಿಗೆ ಬಿರು ಬಿಸಿಲಿನಲ್ಲೂ ರ್ಯಾಲಿಯೊಂದಿಗೆ ಕುಮಟಾಕ್ಕೆ ತೆರಳಿದರು. ರಸ್ತೆಯ ಅಕ್ಕಪಕ್ಕದ ಇಕ್ಕೆಲಗಳಲ್ಲಿ ನಿಂತು ನೋಡುತ್ತಿದ್ದ ಜನಕ್ಕೆ ಡಾ.ಅಂಜಲಿ ಹಾಗೂ ಬೀನಾ ವೈದ್ಯ ಕೈಬೀಸಿದರು. 

ರ್ಯಾಲಿಯಲ್ಲಿ ಜೈ‌ ಭಜರಂಗಿ ಬಾವುಟ ಎಲ್ಲರ ಗಮನ ಸೆಳೆದರೆ, ಸಹಸ್ರಾರು ಬೈಕ್‌ಗಳು ಸಾಗರದಂತೆ ಹೆದ್ದಾರಿಯಲ್ಲಿ ಸಾಗುವ ಮೂಲಕ ವಿರೋಧಿ ಪಾಳಯದ ಎದೆಯಲ್ಲಿ ತಳಮಳ ಉಂಟುಮಾಡಿತು‌.

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...