ಕೆಪಿಸಿಸಿ ಅಧ್ಯಕ್ಷರಿಂದ ಬಿ ಫಾರಂ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ

Source: SOnews | By Staff Correspondent | Published on 6th April 2024, 7:38 PM | Coastal News | National News |

 

ಬೆಂಗಳೂರು: ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರು ಇಂದು ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸ್ಪರ್ಧೆಗೆ ಪಕ್ಷದ ಬಿ ಫಾರಂ ಪಡೆದರು. 

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಚೇರಿಯಲ್ಲಿ ಡಾ.ಅಂಜಲಿ ಅವರಿಗೆ ಬಿ ಫಾರಂ ಹಸ್ತಾಂತರಿಸಿ, ಚುನಾವಣೆಯಲ್ಲಿ ವಿಜಯಶಾಲಿಯಾಗಲಿ ಎಂದು ಶುಭ ಹಾರೈಸಿದರು. 

ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಕಿತ್ತೂರು ಶಾಸಕರ ಬಾಬಾಸಾಹೇಬ ಪಾಟೀಲ್ ಮತ್ತು ಕಿತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಗನಗೌಡ ಪಾಟೀಲ್ ಉಪಸ್ಥಿತರಿದ್ದರು.

ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಅವರು ಏ.16ರಂದು ಬೆಳಿಗ್ಗೆ 10ಕ್ಕೆ ಕಾರವಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.

Read These Next

ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ಪತ್ತೆಹಚ್ಚುವ ಕಾರ್ಯಾಚರಣೆ ;ಪೊಕ್ಲೆನ್ ಯಂತ್ರ ಬಳಸಿ ಕಾರ್ಯಾಚರಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರಿನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದಿಂದ ನಾಪತ್ತೆಯಾಗಿರುವ ಲಾರಿ ಚಾಲಕ ಅರ್ಜುನ್ ...

ಡೆಹ್ರಾಡೂನ್: ಕ್ರೈಸ್ತ ಪ್ರಾರ್ಥನಾ ಸಭೆಯ ಮೇಲೆ ಸಂಘ ಪರಿವಾರದಿಂದ ದಾಳಿ; ಏಳು ಜನರಿಗೆ ಹಲ್ಲೆ

ಸಂಘ ಪರಿವಾರ ಕಾರ್ಯಕರ್ತರ ಗುಂಪೊಂದು ರವಿವಾರ ಇಲ್ಲಿ ಕ್ರೈಸ್ತ ಪ್ರಾರ್ಥನಾ ಸಭೆ ನಡೆಯುತ್ತಿದ್ದ ಮನೆಯ ಮೇಲೆ ದಾಳಿ ನಡೆಸಿದೆ. ಕನಿಷ್ಠ ...

ಲೋಕಸಭಾ ಚುನಾವಣೆಯ ಬಳಿಕ ಮುಸ್ಲಿಮರ ವಿರುದ್ಧ ಗುಂಪು ದಾಳಿ ಪ್ರಕರಣದಲ್ಲಿ ಹೆಚ್ಚಳ; ಜಮಾಅತೆ ಇಸ್ಲಾಮೀ ಹಿಂದ್ ಕಳವಳ

ಹೊಸದಿಲ್ಲಿ : ದೇಶದಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರದ ಪ್ರಕರಣಗಳು ಅಧಿಕಗೊಂಡಿದ್ದು, ಅದರಲ್ಲೂ ಲೋಕಸಭಾ ಚುನಾವಣೆಯ ಬಳಿಕ ...

ಬ್ರಿಟಿಷ್ ಯುಗದ ಕಾನೂನುಗಳಿಗೆ ತೆರೆ; ಇಂದಿನಿಂದ ಮೂರು ನೂತನ ಕ್ರಿಮಿನಲ್ ಕಾಯ್ದೆಗಳು ಜಾರಿ

ಸೋಮವಾರ, ಜುಲೈ 1ರಂದು ಮೂರು ನೂತನ ಕ್ರಿಮಿನಲ್ ಕಾನೂನುಗಳು ದೇಶಾದ್ಯಂತ ಜಾರಿಗೊಳ್ಳಲಿದ್ದು ಬ್ರಿಟಿಷ್ ಯುಗದ ಕಾನೂನುಗಳು ಅಸ್ತಿತ್ವ ...