ಕರ್ನಾಟಕ ವಿಧಾನಸಭೆ ಚುನಾವಣೆ; ಎರಡು ವಿಚಾರಧಾರೆಗಳ ನಡುವಿನ ಹೋರಾಟ-ರಾಹುಲ್

Source: sonews | By Staff Correspondent | Published on 26th April 2018, 5:25 PM | Coastal News | State News | Don't Miss |

ಅಂಕೋಲಾ: ಕರ್ನಾಟಕದಲ್ಲಿ ನಡಯುವ ಚುನಾವಣೆಯು ಎರಡು ವಿಚಾರಧಾರೆಗಳ ನಡುವಿನ ಹೋರಾಟವಾಗಿದೆ ಎಂದು ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಅವರು ಗುರುವಾರ ಅಂಕೋಲಾದಲ್ಲಿ ನಡೆದ ಕಾಂಗ್ರೇಸ್ ಪಕ್ಷದ ರೋಡ್ ಷೋ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಉರಿಬಿಸಿಲಿನಲ್ಲೂ ಕಿಕ್ಕಿರಿದು ಸೇರಿದ ಜನತೆಯನ್ನು ಅಭಿನಂದಿಸಿದ ಅವರು, ರಾಜ್ಯದಲ್ಲಿ ಚುನಾವಣೆಯು ಬಿಜೆಪಿ ಆರ್.ಎಸ್‌ಎಸ್ ವಿಚಾರಧಾರೆಗಳ ವಿರುದ್ಧ ನಡೆಯುವ ಹೋರಾಟವಾಗಿದ್ದು ಇಲ್ಲಿ ಬಡವರು ಬೆವರು ಸುರಿಸಿ ದುಡಿಯುತ್ತಾರೆ. ಅವರು ತಕ್ಕ ಬೆಲೆ ಸಿಗಬೇಕು. ಆದರೆ ಆರ್.ಎಸ್.ಎಸ್.ಬಿಜೆಪಿ ಹೇಳುತ್ತದೆ ರಾಜ್ಯದ ಜನತೆಯ ಹಣ ೧೦-೧೫ ಉದ್ಯೋಗಪತಿಗಳ ಜೇಬು ತುಂಬಬೇಕು. ಇದು ಪ್ರಮುಖವಾಗಿ ಕಾಂಗ್ರೇಸ್ ಮತ್ತು ಬಿಜೆಪಿ, ಆರ್.ಎಸ್.ಎಸ್.ಗಳ ನಡುವೆ ಇರುವ ವಿಚಾರಧಾರೆಯ ಅಂತರವಾಗಿದೆ. ಉದ್ಯೋಗಪತಿಗಳ ಮನೆ ತುಂಬುವ ಕೆಲಸವನ್ನು ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ರೈತರ ಸಾಲವನ್ನು ಮನ್ನ ಮಾಡಿ ಎಂದರೆ ಇದು ನಮ್ಮ ನೀತಿಯಲ್ಲ ಎಂದು ಮೋದಿ ಹೇಳುತ್ತಾರೆ. ೨.೫ಲಕ್ಷ ಕೋಟಿ ಸಾಲವನ್ನು ಕಳೆದ ವರ್ಷ ಮೋದಿಯವರು ಶ್ರೀಮಂತರಿಗಾಗಿ ಮನ್ನಾ ಮಾಡಿದ್ದಾರೆ. ಅವರಿಗೆ ಬಡರೈತರ ಸಾಲಮನ್ನಾ ಮಾಡಲು ಹಣವಿಲ್ಲ. ಇದು ಕಾಂಗ್ರೇಶ್ ಮತ್ತು ಬಿಜೆಪಿಯ ನಡುವಿ ವಿಚಾರಧಾರೆಯ ವ್ಯತ್ಯಾಸವಾಗಿದೆ.

ಸಿದ್ದರಾಮಯ್ಯ ಬಡವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಬ್ರಷ್ಟ್ರ ಯಡಿಯೂರಪ್ಪ ಹಾಗೂ ನಾಲ್ಕು ಬ್ರಷ್ಟ ಮಂತ್ರಿಗಳನ್ನು ಮುಂದಿಟ್ಟುಕೊಂಡು ಭ್ರಷ್ಟಚಾರ ತೊಲಗಿಸುವ ಮಾತನಾಡುವ ಮೋದಿಗೆ ಜೈಲಿಗೆ ಹೋಗಿ ಬಂದಿರುವ ವ್ಯಕ್ತಿಗಳು ಕಣ್ಣಿಗೆ ಕಾಣುವುದಿಲ್ಲ. ೧೫ಲಕ್ಷ ರೂ ಬ್ಯಾಂಕ್ ಖಾತೆ ಹಾಕುತ್ತೇನೆ ಎಂದು ಹೇಳುವ ಮೋದಿಜಿ ಯಾರ ಖಾತೆಗೆ ಹಾಕಿದ್ದಾರೆ ಎಂದು ಜನರಿಗೆ ಕೇಳುವುದರ ಮೂಲಕ ಅವರು ಮೋದಿಯವರನ್ನು ತರಾಟೆಗೆ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...