ಮುಂಡಗೋಡ: ಭಾರತ ಸಂವಿಧಾನದ ಶಿಲ್ಪಿ ಡಾಃ ಬಿ. ಆರ್. ಅಂಬೇಡ್ಕರ್ ರವರ ಜನ್ಮದಿನಾಚರಣೆ ಸ್ಮರಣಾರ್ಥವಾಗಿ ಸಂವಿಧಾನ ದಿನಾಚರಣೆ
ಮುಂಡಗೋಡ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರವಾರ, ತಾಲೂಕು ಕಾನೂನು ಸೇವಾ ಸಮಿತಿ ಮುಂಡಗೋಡ, ವಕೀಲರ ಸಂಘ ಮುಂಡಗೋಡ ಹಾಗೂ ಮುಂಡಗೋಡದ ವಿವಿದs ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ಭಾರತ ಸಂವಿಧಾನದ ಶಿಲ್ಪಿ ಡಾಃ ಬಿ. ಆರ್. ಅಂಬೇಡ್ಕರ್ ರವರ ಜನ್ಮದಿನಾಚರಣೆ ಸ್ಮರಣಾರ್ಥವಾಗಿ ಸಂವಿಧಾನ ದಿನಾಚರಣೆ ಹಾಗೂ ಪ್ರತಿಜ್ಞಾ ವಿಧಿ ಭೋದsನಾ ಕಾರ್ಯಕ್ರಮವನ್ನು ಗುರವಾರ ನ್ಯಾಯಾಲಯ ಆವರಣ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು.
ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಕೇಶವ ಕೆ. ಇವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸ್ವಾತಂತ್ರ್ಯಕ್ಕಿಂತ ಮೊದಲು ನಮ್ಮ ದೇಶವನ್ನು ಬ್ರಿಟಿಷರಿಂದ ಭಾರತವನ್ನು ಮುಕ್ತಿಗೊಳಿಸಬೇಕು ಎಂದು ಭಾರತದ ಎಲ್ಲ ಜನರು ನಾಯಕರು ಬ್ರಿಟಿಷರ ವಿರುದ್ದ ದಂಗೆ ಎದ್ದು ಉಪನ್ಯಾಸ ಸತ್ಯಾಗ್ರಹ, ಸತತ ಹೋರಾಟ ಮಾಡಿ ಭಾರತದ ಹಲವಾರು ನಾಯಕರುಗಳ ಪ್ರಾಣತ್ಯಾಗ, ಬಲಿದಾನದಿಂದ ಭಾರತವನ್ನು ಬ್ರಿಟಿಷರಿಂದ ಮುಕ್ತಿಗೊಳಿಸಿದರು. ನಂತರ ಡಾ. ಬಿ. ಆರ್. ಅಂಬೇಡ್ಕರ್ ರವರ ಮುಂದಾಳತ್ವದಲ್ಲಿ ಭಾರತದ ಏಳಿಗೆಗೋಸ್ಕರ ಸಂವಿಧಾನವನ್ನು ರಚಿಸಲಾಯಿತು. ನಾವೇಲ್ಲರೂ ಸಂವಿಧಾನದ ಚೌಕಟ್ಟಿನಲ್ಲಿ ಜೀವನ ನಡೆಸಬೇಕು. ನವೆಂಬರ್ 26 ರಂದು ಭಾರತದ ಸಂವಿಧಾನವನ್ನು ಅಂಗಿಕರಿಸಲಾಯಿತು. ಕರಡು ಸಮಿತಿಯ ಅದs್ಯಕ್ಷರಾದ ಡಾ. ಬಿ. ಆರ್. ಅಂಬೇಡ್ಕರ್ ಅವರನ್ನು ಭಾರತ ಸಂವಿಧಾನದ ವಾಸ್ತುಶಿಲ್ಪಿ ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ. ನಾವೆಲ್ಲರೂ ನಮ್ಮ ಸಂವಿಧಾನವನ್ನು ಗೌರವಿಸಬೇಕು. ಕಾರಣ ಸಮಾಜದ ಕಟ್ಟ ಕಡೆಯ ಪ್ರಜೆಯು ಭಾರತದ ಸಂವಿಧಾನ ಹಾಗೂ ಕಾನೂನನ್ನು ತಿಳಿದುಕೊಂಡಿರಬೇಕು ಎಂಬುದು ಇದರ ಮುಖ್ಯ ಉದ್ದೇಶ.
ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿಗಳಾ ಎಸ್. ಪಿ. ಸಮ್ಮಸಗಿ ಸಂವಿಧಾನ ದಿನದ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು.
ನ್ಯಾಯವಾದಿ ಕೆ. ಎನ್. ಹೆಗಡೆ ಸಂವಿಧಾನ ದಿನ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ವಕೀಲರಾದ ಆರ್. ಎಂ. ಮಳಗೀಕರ್ ಮತ್ತು ಅನ್ನಪೂರ್ಣ ಎಸ್. ¨Àsಟ್ ವಕೀಲರುಗಳು ಸಂವಿಧಾನದ ಉಗಮ, ರಚನೆ, ಅದರ ಕಾರ್ಯಗಳು, ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ತಮ್ಮ ಉಪನ್ಯಾಸದಲ್ಲಿ ತಿಳಿಸಿಕೊಟ್ಟರು.
ಕಾಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾರ್ಯಕ್ರಮದ ಅದs್ಯಕ್ಷತೆಯನ್ನು ವಹಿಸಿದ್ದ ವಕೀಲ ಜಿ. ಎಸ್. ಕಾತೂರ ಮಾತನಾಡಿ ಸಂವಿಧಾನವು ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದೆ. ಅವುಗಳನ್ನು ನಾವು ಸರಿಯಾಗಿ ಬಳಸಿಕೊಳ್ಳಬೇಕು. ಎಲ್ಲರೂ ಸಂವಿಧಾನವನ್ನು ಗೌರವಿಸೋಣ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ವಕೀಲ ಬಿ. ಎಫ್. ಪೂಜಾರ ನ್ಯಾಯಾಲಯದ ಎಲ್ಲ ಹಿರಿಯ, ಕಿರಿಯ ನ್ಯಾದಯವಾದಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಕೀಲರಾದ ಆರ್. ಎಸ್. ಹಂಚಿನಮನಿ ಅವರು ಸ್ವಾಗತಿಸಿ, ನಿರೂಪಿಸಿದರು. ಹಾಗೂ ವಕೀಲ ಎಂ. ಎ. ನಂದಿಕಟ್ಟಿ ವಂದನಾರ್ಪಣೆ ಮಾಡಿದರು.