ಏ.10 ರಿಂದ 20 ರ ವರೆಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ಕರ್ಫ್ಯೂಜಾರಿ-ಜಿಲ್ಲಾಧಿಕಾರಿ

Source: SO News | By Laxmi Tanaya | Published on 9th April 2021, 10:28 PM | Coastal News | Global News |

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂದಿಸಿದಂತೆ ಜಿಲ್ಲಾಡಳಿತ ಎಲ್ಲಾ ಅವಶ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು,  ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಹರಡುವಿಕೆ ಉಲ್ಬಣವಾಗಿದ್ದು, ನಿಯಂತ್ರಣ ಕಾರ್ಯ ಅವಶ್ಯಕವಾಗಿರುವುದರಿಂದ  ರಾಜ್ಯ ಸರ್ಕಾರವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ   ಏ. 10 ರಿಂದ 20 ರ ವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಮುಂದಿನ ಆದೇಶದವರೆಗೆ  ಕೊರೋನಾ ಕರ್ಫ್ಯೂ ಜಾರಿಗೊಳಿಸಿ ಆದೇಶಿಸಿದ್ದು,  ಈ ಸಂದರ್ಭದಲ್ಲಿ  ಕೆಳಕಂಡ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿ, ಉಳಿದಂತೆ ಎಲ್ಲಾ ಸೇವೆಗಳನ್ನು /ಸಂಚಾರಗಳನ್ನು ನಿಷೇಧಿಸಿ ಈ ಕೆಳಕಂಡಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. 

ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತುಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆಅನುಮತಿ ನೀಡಲಾಗಿದೆ.ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹಎಲ್ಲಾ ಕಾರ್ಖಾನೆಗಳು/ಕಂಪನಿಗಳು /ಸಂಸ್ಥೆಗಳು ಯಥಾರೀತಿಯಲ್ಲಿಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.ಆದರೆ ಸಂಬಂಧಿಸಿದ ಕಾರ್ಮಿಕರು /ನೌಕರರು ಕರೋನ ಕರ್ಪ್ಯೂ ಅವಧಿಗೆ ಮುನ್ನವೇ ಕರ್ತವ್ಯದಲ್ಲಿ ಹಾಜರಿರಬೇಕು.
ದೂರಸಂಪರ್ಕ ಮತ್ತುಅಂತರ್ಜಾಲ ಸೇವಾ ಸಂಸ್ಥೆಗಳು ಹಾಗೂ ಮಾಹಿತಿತಂತ್ರಜ್ಞಾನ ಮತ್ತು ಮಾಹಿತಿತಂತ್ರಜ್ಞಾನಆಧಾರಿತ ಸಂಸ್ಥೆಗಳ ಸಿಬ್ಬಂದಿಗಳು ರಾತ್ರಿ ಪಾಳಿಯಲ್ಲಿ ಅಧಿಕೃತ ಕಚೇರಿ ಗುರುತಿನ ಚೀಟಿ ಹೊಂದಿ ಸಂಚರಿಸಲುಅನುಮತಿ ನೀಡಲಾಗಿದೆ.

    ವೈದ್ಯಕೀಯ ಸೇವೆ ಮತ್ತು ತುರ್ತು ಚಟುವಟಿಕೆಗೆ ಮಾತ್ರಅನುಮತಿ ನೀಡಲಾಗಿದ್ದು,  ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು, ಸರಕು ಸಾಗಣಿಕೆ ವಾಹನಗಳು, ಹೋಮ್‌ಡೆಲಿವರಿ, ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರಅನುಮತಿ ನೀಡಲಾಗಿದೆ.

ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದದೂರ ಪ್ರಯಾಣಕ್ಕೆಅನುಮತಿ ನೀಡಲಾಗಿದ್ದು, ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್‌ಗಳ ಆಧಾರದ ಮೇಲೆ ಆಟೋ/ ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಬಹುದು.
ಮೇಲಿನ ಆದೇಶಗಳನ್ನು ಪಾಲಿಸದೇಇರುವವರ ವಿರುದ್ಧ ವಿಪತ್ತು ನಿರ್ವಹಣಾಕಾಯ್ದೆ 2005 ,  ಭಾರತೀಯ ದಂಡ ಸಂಹಿತೆ ಹಾಗೂ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...