ಬೆಂಗಳೂರು: ಕೊರೊನಾ ರೂಪಾಂತರ ವೈರಸ್ ಭಯದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.
ಒಟ್ಟು 9 ದಿನಗಳ ಕಾಲ ರಾತ್ರಿ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇದೆ ಎಂದು ಅವರು ಹೇಳಿದ್ದಾರೆ.
ಡಿಸೆಂಬರ್ 23 ರಿಂದ ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರಲಿದ್ದು ಕ್ರಿಸ್ಮಸ್ ಮತ್ತು ಹೊಸ ವರ್ಷದ ಆಚರಣೆಗೆ ಕಡಿವಾಣ ಹಾಕಿದಂತಾಗಿದೆ.
ಕರ್ಪ್ಯೂ ಅವಧಿಯಲ್ಲಿ ಹೋಟೆಲ್, ರೆಸ್ಟೋರೆಂಟ್ಗಳು ಬಂದ್ ಆಗಲಿದ್ದು, ಯಾವುದೇ ವ್ಯಾಪಾರ, ವಹಿವಾಟುಗಳೂ ನಡೆಯುವುದಿಲ್ಲ. ಸಂಜೆ 5 ಗಂಟೆಗೆ ನೈಟ್ಕರ್ಫ್ಯೂ ಸಂಬಂಧ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ಅವರು ಹೇಳಿದ್ದಾರೆ.