ಭಟ್ಕಳ ತಾಲೂಕಿನ ಗ್ರಾಮೀಣ ಭಾಗಕ್ಕೂ ಕಾಲಿಟ್ಟ ಕೊರೋನಾ; ಜಿಲ್ಲೆಯಲ್ಲಿಂದು 6 ಪ್ರಕರಣ ದೃಢ

Source: sonews | By Staff Correspondent | Published on 16th June 2020, 3:05 PM | Coastal News | Don't Miss |

ಭಟ್ಕಳ  ಕೊರೋನಾ ಸೋಂಕು ತನ್ನ ಕದಂಬ ಬಾಹುವನ್ನು ವಿಸ್ತರಿಸುತ್ತಿದ್ದು ಇಲ್ಲಿಯವರೆಗೆ ಕೇವಲ ಭಟ್ಕಳಕ್ಕೆ ಮಾತ್ರ ಸೀಮಿತವಾಗಿದ್ದ ಕೊರೋನಾ ಈಗ ತಾಲೂಕಿನ ಗ್ರಾಮೀಣ ಭಾಗಕ್ಕೂ ಕಾಲಿಟ್ಟುದ್ದು ಗ್ರಾಮೀಣ ಪ್ರದೇಶದ ಜನರಲ್ಲಿ ಆತಂಕ ಮೂಡಲು ಕಾರಣವಾಗಿದೆ.

ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನಲ್ಲಿದ್ದ ತೆರ್ನಾಮಕ್ಕಿಯ ವ್ಯಕ್ತಿಯೊಬ್ಬರಲ್ಲಿ ಇಂದು ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ಕೊರೋನಾ ಸೋಂಕಿನಿಂದ ಸುರಕ್ಷಿತವಾಗಿದ್ದ ಗ್ರಾಮೀಣ ಪ್ರದೇಶದ ಜನತೆಗೆ ಈಗ ಕೊರೋನಾ ಚಿಂತೆ ಕಾಡುತ್ತಿದೆ.

ಜಿಲ್ಲೆಯಲ್ಲಿಂದು ಒಟ್ಟು ಆರು ಕೋವಿಡ್-19 ಪ್ರಕರಣಗಳು ದೃಡಪಟ್ಟಿದ್ದು

ಯಲ್ಲಾಪುರದಲ್ಲಿ ಮೂರು, ಮುಂಡಗೋಡ ಹಾಗೂ ಹೊನ್ನಾವರ ತಾಲೂಕಿನಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ  ಇಂದು ಒಟ್ಟು 6 ಕೋವಿಡ್- 19 ಪ್ರಕರಣಗಳು ಪತ್ತೆಯಾಗಿವೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...