ಭಟ್ಕಳ ಕೊರೋನಾ ಸೋಂಕು ತನ್ನ ಕದಂಬ ಬಾಹುವನ್ನು ವಿಸ್ತರಿಸುತ್ತಿದ್ದು ಇಲ್ಲಿಯವರೆಗೆ ಕೇವಲ ಭಟ್ಕಳಕ್ಕೆ ಮಾತ್ರ ಸೀಮಿತವಾಗಿದ್ದ ಕೊರೋನಾ ಈಗ ತಾಲೂಕಿನ ಗ್ರಾಮೀಣ ಭಾಗಕ್ಕೂ ಕಾಲಿಟ್ಟುದ್ದು ಗ್ರಾಮೀಣ ಪ್ರದೇಶದ ಜನರಲ್ಲಿ ಆತಂಕ ಮೂಡಲು ಕಾರಣವಾಗಿದೆ.
ಮಹಾರಾಷ್ಟ್ರದಿಂದ ಬಂದು ಕ್ವಾರೆಂಟೈನಲ್ಲಿದ್ದ ತೆರ್ನಾಮಕ್ಕಿಯ ವ್ಯಕ್ತಿಯೊಬ್ಬರಲ್ಲಿ ಇಂದು ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ಕೊರೋನಾ ಸೋಂಕಿನಿಂದ ಸುರಕ್ಷಿತವಾಗಿದ್ದ ಗ್ರಾಮೀಣ ಪ್ರದೇಶದ ಜನತೆಗೆ ಈಗ ಕೊರೋನಾ ಚಿಂತೆ ಕಾಡುತ್ತಿದೆ.
ಜಿಲ್ಲೆಯಲ್ಲಿಂದು ಒಟ್ಟು ಆರು ಕೋವಿಡ್-19 ಪ್ರಕರಣಗಳು ದೃಡಪಟ್ಟಿದ್ದು
ಯಲ್ಲಾಪುರದಲ್ಲಿ ಮೂರು, ಮುಂಡಗೋಡ ಹಾಗೂ ಹೊನ್ನಾವರ ತಾಲೂಕಿನಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿ ಇಂದು ಒಟ್ಟು 6 ಕೋವಿಡ್- 19 ಪ್ರಕರಣಗಳು ಪತ್ತೆಯಾಗಿವೆ.