ಕೊರೊನಾ ರೋಗಿಗಳ ಫೋಟೋ ಸೆರೆಹಿಡಿದರೆ ಕಠಿಣ ಕ್ರಮ: ಭಾಸ್ಕರ್ ರಾವ್ ಎಚ್ಚರಿಕೆ

Source: UNI | Published on 22nd June 2020, 4:30 PM | State News | Don't Miss |

ಬೆಂಗಳೂರು: ಇನ್ಮುಂದೆ ಅನುಮತಿ ಇಲ್ಲದೆ‌ ಕೊರೊನಾ ಸೋಂಕಿತ ರೋಗಿಗಳ ಛಾಯಾಚಿತ್ರ ಸೆರೆಹಿಡಿಯದಂತೆ ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್ ಅವರು ಖಡಕ್ ಎಚ್ಚರಿಕೆ  ನೀಡಿದ್ದಾರೆ.
ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸ್ಥಳೀಯರು ತಮ್ಮ ಮೊಬೈಲ್​ಗಳಲ್ಲಿ ಛಾಯಾಚಿತ್ರ ಸೆರೆಹಿಡಿಯುವುದು ಹೆಚ್ಚಾಗುತ್ತಿದ್ದು, ಅದು ಮಾಧ್ಯಮಗಳಲ್ಲೂ ಬಿತ್ತರವಾಗುತ್ತಿದೆ.‌‌ ಹೀಗಾಗಿ ಈ ಕುರಿತು ಅನೇಕ ಜನ ದೂರು ನೀಡುತ್ತಿದ್ದಾರೆ. ಈ ರೀತಿ ಫೋಟೋ/ವಿಡಿಯೋ ಸೆರೆಹಿಡಿಯುವುದರಿಂದ ನಮ್ಮ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ ಹಾಗೂ ಮುಜುಗರ ಉಂಟಾಗುತ್ತದೆ ಎಂದು ಅವರು ದೂರುತ್ತಿದ್ದಾರೆ.
ಹೀಗಾಗಿ ಯಾರೂ ಅನುಮತಿ ಇಲ್ಲದೇ ಕೊರೊನಾ ರೋಗಿಗಳ ಛಾಯಾಚಿತ್ರ ಸೆರೆಹಿಡಿಯುವಂತಿಲ್ಲ. ಈ ನಿಯಮ  ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...