ನವದೆಹಲಿ: ಕ್ರಿಕೆಟ್ ಸ್ಪಾಟ್ ಫಿಕ್ಸಿಂಗಲ್ಲಿ ಸಿಲುಕಿ ನಿಷೇಧ ಶಿಕ್ಷೆ ಅನುಭವಿಸಿದ್ದ ಭಾರತದ ವೇಗದ ಬೌಲರ್ ಎಸ್. ಶ್ರೀಶಾಂತ್ ಪುನಃ ಮೈದಾನಕ್ಕಿಳಿಯಲು ಕಾತರರಾಗಿದ್ದಾರೆ.
2013ರಲ್ಲಿ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ ಭಾಗಿಯಾಗಿದ್ದರಿಂದ ಬಿಸಿಸಿಐ ಅವರಿಗೆ ಆಜೀವ ನಿಷೇಧ ಶಿಕ್ಷೆ ವಿಧಿಸಿತ್ತು. ಆದರೆ ಸುಪ್ರಿಮಕೋರ್ಟ್ ಮೊರೆ ಹೋಗಿದ್ದರಿಂದ ನಿಷೇಧ ಅವಧಿ ಏಳು ವರ್ಷಕ್ಕೆ ಇಳಿದಿತ್ತು.
ಅವರ ಏಳು ವರ್ಷಗಳ ನಿಷೇಧ ಶಿಕ್ಷೆ ಅವಧಿ ಭಾನುವಾರ ಕೊನೆಗೊಂಡಿದೆ.
2007 ರ ಟಿ ಟ್ವೆಂಟಿ ವಿಶ್ವಕಪ್ ಮತ್ತು 2011 ಏಕದಿನ ವಿಶ್ವಕಪ್ ವಿಜೇತ ತಂಡದಲ್ಲಿ ಶ್ರೀಶಾಂತ ಭಾಗವಾಗಿದ್ದರು.
ನಿಷೇಧ ಅವಧಿ ಮುಕ್ತಾಯಗೊಂಡಿದ್ದರಿಂದ ದೇಶಿಯ ಮಟ್ಟದಲ್ಲಿ ಮತ್ತೆ ವೃತ್ತಿ ಜೀವನ ಆರಂಭಿಸುವುದಾಗಿ 37 ವರ್ಷದ ಶ್ರೀಶಾಂತ್ ಸ್ಪಷ್ಪಪಡಿಸಿದ್ದಾರೆ.
ಕೇರಳ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಆಟವಾಡಲು ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೀಗಾಗಿ ಕೇರಳ ಕ್ರಿಕೆಟ್ ಕ್ಲಬ್ ಒಂದರಲ್ಲಿ ಬೌಲಿಂಗ್ ಅಭ್ಯಾಸ ಮಾಡುತ್ತಿದ್ದಾರೆ. ಇನ್ನೂ ಕೆಲ ದಿನಗಳಲ್ಲಿ ಅವರು ಕ್ರಿಕೆಟ್ ಪ್ರಿಯರನ್ನ ಸೆಳೆಯಲಿದ್ದಾರೆ.