ಮಂಗಳೂರು : ವಕ್ಫ್ ಭೂಮಿ ಅಕ್ರಮ ಪ್ರಕರಣಗಳ ಬಗ್ಗೆ ಮುಂದಿನ ಸದನದ ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಈ ಬಗ್ಗೆ ವರದಿ ಸರಕಾರಕ್ಕೆ ಸಲ್ಲಿಕೆಯಾಗಿದೆ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ ತಿಳಿಸಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಕೋಮು ಸೌಹಾರ್ದ ಕಾಪಾಡಿಕೊಂಡರೆ ರಾಜ್ಯಕ್ಕೆ ಮಾದರಿಯಾಗಬಹುದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕೋಮು ಸೌಹಾರ್ದ ಕಾಪಾಡಲು ಆಯೋಗ ಪ್ರಥಮ ಆದ್ಯತೆ ನೀಡುತ್ತದೆ. ಈ ನಿಟ್ಟಿನಲ್ಲಿ ಕೋಮು ಸೂಕ್ಷ್ಮ ಜಿಲ್ಲೆ ಗಳಿಗೆ ಅಧಿಕಾರಿಗಳನ್ನು ನೇಮಿಸುವಾಗ ದಕ್ಷ,ಪ್ರಾಮಾಣಿಕ ಸಮರ್ಥ ಅಧಿಕಾರಿಗಳ ಅಗತ್ಯವಿದೆ ಅಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎನ್.ಬಿ.ಅಬೂಬಕರ್, ಅಲ್ಪ ಸಂಖ್ಯಾತರ ವಿವಿಧ ಸಂಘಟನೆಗಳ ಪ್ರತಿನಿಧಿಗಳಾದ ಬಶೀರ್ ಬೈಕಂಪಾಡಿ, ಹೈದರ್ ಪರ್ತಿಪ್ಪಾಡಿ, ಶಹನವಾಝ್, ಜಮಾಲ್, ಹಮೀದ್, ಅಸ್ಗರ್ ಇಕ್ಬಾಲ್ ಮೊದಲಾದವರು ಉಪಸ್ಥಿತರಿದ್ದರು.