ದಾವಣಗೆರೆ: ಯುವಕನೋರ್ವನನ್ನು ಮಾರಕಾಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಹರಿಹರ ತಾಲೂಕಿನ ವಿದ್ಯಾನಗರ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಕೊಲೆಯಾದ ಯುವಕನ ಗುರುತು ಪತ್ತೆಯಾಗಿಲ್ಲ.
ವಿದ್ಯಾನಗರದ ನೌಕರರ ಲೇಔಟ್ನ ರಸ್ತೆಯಲ್ಲಿ ಈ ಹತ್ಯೆ ನಡೆದಿದೆ. ಯುವಕನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈಯಲಾಗಿದೆ. ಕೊಲೆಯಾದ ಯುವಕ ಕೈಯ ಮೇಲೆ ‘ಸಂತು’ ಎಂದು ಹಚ್ಚೆ ಹಾಕಿಸಿಕೊಂಡಿದ್ದಾನೆ. ಆತನ ಗುರುತುಪತ್ತೆ ಇನ್ನಷ್ಟೇ ಆಗಬೇಕಿದೆ.
ಘಟನಾ ಸ್ಥಳಕ್ಕೆ ಹರಿಹರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮುಂದುವರಿದಿದೆ.