ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಶ್ರೀನಿವಾಸಪುರ ಪುರಸಭಾ ವ್ಯಾಪ್ತಿಯಲ್ಲಿ ಕಾಮಗಾರಿಗಳ ಪರಿಶೀಲನೆ

Source: Shabbir Ahmed | By I.G. Bhatkali | Published on 17th September 2023, 10:06 PM | State News |

ಶ್ರೀನಿವಾಸಪುರ: ರಜಾ ದಿನದಂದು ಫೀಲ್ಡಿಗಿಳಿದ ಜಿಲ್ಲಾಧಿಕಾರಿ ಅಕ್ರಂ ಪಾಷ ಪುರಸಭಾ ವ್ಯಾಪ್ತಿಯ ಇಂದಿರಾ ನಗರ, ಮಾರುತಿ ನಗರ, ಡಾ. ಜಾಕೀರ್ ಹುಸೇನ್ ಮೊಹಲ್ಲಾ, ವೆಂಕಟೇಶ್ವರ ಬಡಾವಣೆ ಸೇರಿದಂತೆ ವಿವಿಧ ಬಡಾವಣೆಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಇಂದು ಭೇಟಿ ನೀಡಿ ಸ್ವಚ್ಛತೆ, ಬೀದಿ ದೀಪಗಳ ಸಿ ಸಿ ಎಂ ಎಸ್ ಲೈಟ್ಸ್ ನಿರ್ವಹಣೆ ಹಾಗೂ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ ನಿರ್ವಹಿಸಿರುವ ಸಿ.ಸಿ. ರಸ್ತೆ ಮತ್ತು ಚರಂಡಿ ಕಾಮಗಾರಿ ಸೇರಿದಂತೆ ಒಣ ತ್ಯಾಜ್ಯ ನಿರ್ವಹಣೆ ಘಟಕಗಳನ್ನು ಖುದ್ದಾಗಿ ಪರಿಶೀಲಿಸಿದರು.

ನಂತರ ಪುರಸಭಾ ಕಚೇರಿಗೆ ಭೇಟಿ ನೀಡಿದ ಮಾನ್ಯ ಜಿಲ್ಲಾಧಿಕಾರಿಗಳು ಕೆ.ಎಂ.ಎಫ್-24 ಡಾಟಾ ಎಂಟ್ರಿ ಮತ್ತು ವಿವಿಧ ಲಾಗಿನ್ ಗಳಲ್ಲಿ ಸ್ವತಃ ತಾವೇ ಕರವಸೂಲಿಗರರ ಜೊತೆ ಆಸ್ತಿ ಕಣಜ ತಂತ್ರಾಂಶದಲ್ಲಿ ದತ್ತಾಂಶ ಪರಿಶೀಲನೆ ಮಾಡಿದ ಅವರು ಕೆಎಂಎಫ್-24 ವಹಿಯಲ್ಲಿ ನಿರ್ವಹಿಸಿರುವ ವಿವರ ಸೇರಿದಂತೆ ಪುರಸಭಾ ವಾಣಿಜ್ಯ ಮಳಿಗೆಗಳ ಬಾಡಿಗೆ ವಸೂಲಾತಿ, ಖಾಲಿ ಇರುವ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆ , ಆಸ್ತಿ ತೆರಿಗೆ, ನೀರಿನ ತೆರಿಗೆ ಹಾಗೂ ಎಲ್ಲಾ ಸೆಸ್ಗಳ ವಿವರಗಳ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಯೋಜನಾ ನಿದೇಶಕರ ಕಛೇರಿಯ ಕಾರ್ಯಪಾಲಕ ಅಭಿಯಂತರರಾದ ಶ್ರೀ ಶ್ರೀನಿವಾಸ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಚಲಪತಿ, ಪುರಸಭಾ ಮುಖ್ಯಾಧಿಕಾರಿ ವೈ. ಎನ್. ಸತ್ಯನಾರಾಯಣ, ಕಂದಾಯಧಿಕಾರಿ ವಿ. ನಾಗರಾಜು, ಕಿರಿಯ ಅಭಿಯಂತರಾದ ವಿ. ಶ್ರೀನಿವಾಸಪ್ಪ, ಹಿ.ಆ.ನಿ , ಕೆ. ಜಿ. ರಮೇಶ್ ನೋಡಲ್ ಅಧಿಕಾರಿ ಚೌಡೇಗೌಡ ಹಾಗೂ ಪುರಸಭಾ ಸಿಬ್ಬಂಧಿ ಹಾಜರಿದ್ದರು.

Read These Next

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...

ಕುಡಿಯುವ ನೀರು-ಜಾನುವಾರು ಮೇವಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಚಿವರ ಸೂಚನೆ

ಶಿವಮೊಗ್ಗ : ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ...

ಐ.ಟಿ.ಎಫ್ ಕಲಬುರಗಿ ಓಪನ್-2023ಗೆ ತೆರೆ. ಕಲಬುರಗಿಯಲ್ಲಿ ಟೆನಿಸ್ ತರಬೇತಿ ಕೇಂದ್ರ ಸ್ಥಾಪಿಸಿ: ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೆನಿಸ್ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ...

ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಪಂ ಸಿಇಓ ಸ್ವರೂಪ ಟಿ.ಕೆ.

ಧಾರವಾಡ : ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರು ಅನೀಮಿಯಾದಿಂದ ...