ಮಂಗಳೂರು: ಸಚಿವ ಸ್ಥಾನದ ಆಯ್ಕೆ ವರಿಷ್ಠರು ಮತ್ತು ಸಿಎಂ ಅವರಿಗೆ ಬಿಟ್ಟ ವಿಚಾರ : ಎಂದಾಗ ಡಿಸಿಎಂ ಅಶ್ವಥ್ ನಾರಾಯಣ ಹೇಳಿಕೆ.
ಮಂಗಳೂರು : ಸಚಿವರಾಗಬೇಕೆನ್ನುವುದು ಎಲ್ಲರಿಗೂ ಅಪೇಕ್ಷೆ ಇರುತ್ತೆ. ಶಾಸಕರ ಅಪೇಕ್ಷೆಗಳು ತಪ್ಪಲ್ಲ ಎಂದು ಮಂಗಳೂರಿನಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸಚಿವ ಸ್ಥಾನದ ಆಯ್ಕೆ ವರಿಷ್ಠರು ಮತ್ತು ಸಿಎಂ ಅವರಿಗೆ ಬಿಟ್ಟ ವಿಚಾರವಾಗಿದೆ ಎಂದಾಗ ಡಿಸಿಎಂ ಮಾತಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್ ದನಿಗೂಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ರಾಜಕಾರಣದಲ್ಲಿ ಅಪೇಕ್ಷೆ ಮತ್ತು ಗುರಿ ಇರಬೇಕು. ರಾಷ್ಟ್ರೀಯ ನಾಯಕರ ತೀರ್ಮಾನಕ್ಕೆ ಶಾಸಕರು ಬದ್ಧರಾಗಿರಬೇಕು. ಯಾವ ಹಂತದಲ್ಲೂ ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ ಎಂದು ಹೇಳಿದ್ದಾರೆ.
ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಕಟೀಲ್, ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಸರಕಾರವಿದೆ.
ದೇಶವಿರೋಧಿಗಳಿಗೆ ಯಾವುದೇ ಮನ್ನಣೆ ನೀಡುವುದಿಲ್ಲ. ಅದರ ಹಿಂದೆ ಯಾವುದೇ ಶಕ್ತಿ ಇದ್ದರೂ ಮಟ್ಟ ಹಾಕುತ್ತೇವೆ. ಕಠಿಣ ಕ್ರಮ ಕೈಗೊಳ್ಳೋದಕ್ಕೆ ಸರಕಾರ ಬದ್ಧವಿದೆ.
ರಾಜ್ಯದಲ್ಲಿ ಎಲ್ಲೂ ಇಂತಹ ಚಟುವಟಿಕೆಗೆ ಅವಕಾಶ ನೀಡುವುದಿಲ್ಲ ಎಂದರು
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜಂಟಿ ಸುದ್ದಿಗೋಷ್ಟಿ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.