ಭಟ್ಕಳದಲ್ಲಿ ಬೈಕ್ ಸವಾರನ ಸಾವು ಪ್ರಕರಣ. ನಿರ್ಲಕ್ಷ್ಯ ಮಾಡಿದ ಶಾಲಾ ಟೆಂಪೋ ಚಾಲಕನಿಗೆ ನ್ಯಾಯಾಲಯದಿಂದ ಶಿಕ್ಷೆ.

Source: SO News | By Laxmi Tanaya | Published on 8th September 2021, 8:14 AM | Coastal News | Don't Miss |

ಭಟ್ಕಳ: ಖಾಸಗೀ ಶಾಲಾ ವಾಹನವೊಂದರ ಚಾಲಕನ  ನಿರ್ಲಕ್ಷತನದಿಂದ ಚಾಲನೆ ಮಾಡಿ  ಓರ್ವರ ಸಾವಿಗೆ ಕಾರಣನಾಗಿದ್ದಲ್ಲದೇ ದ್ವಿಚಕ್ರ ವಾಹನ, ರಿಕ್ಷಾ ಮತ್ತು ಕಾರುಗಳಿಗೆ ಹಾನಿಯುಂಟು ಮಾಡಿದ್ದ ಪ್ರಕರಣವನ್ನು ತನಿಖೆ ನಡೆಸಿದ ಇಲ್ಲಿನ ಪ್ರಧಾನ ಸಿವಿಲ್ ನ್ಯಾಯಾಧೀಶ ಫವಾಜ್ ಪಿ.ಎ. ಅವರು ಆರೋಪಿತನಿಗೆ 8 ತಿಂಗಳು ಸಜೆ ಹಾಗೂ 3500 ರೂಪಾಯಿಗಳ ದಂಢ ವಿಧಿಸಿ ತೀರ್ಪು ನೀಡಿದ್ದಾರೆ. 

2015ರ ಜೂನ್ 18ರಂದು ಮಧ್ಯಾಹ್ನದ ಸಮಯ್ಲ್ಲಿ ಬಂದರ್ ರಸ್ತೆಯಿಂದ ಶಂಶುದ್ದೀನ್ ಸರ್ಕಲ್ ಕಡೆಗೆ ಬರುತ್ತಿದ್ದ ಶಾಲಾ ಟೆಂಪೋ ಚಾಲಕ ಸೈಫುಲ್ಲಾ ಮೊಹಿನುದ್ದೀನ್ ಕೊಜಾಪು ಶಾಬಂದ್ರಿ ಈತನು  ಬೈಕ್ ನಿಲ್ಲಿಸಿಕೊಂಡು ಕಾಯುತ್ತಿದ್ದ ವ್ಯಕ್ತಿಯೋರ್ವರಿಗೆ ಡಿಕ್ಕಿ ಹೊಡೆದಿದ್ದ. ಪರಿಣಾಮವಾಗಿ ಅವರು ಸ್ಥಳದಲ್ಲಿಯೇ ಮೃತ ಪಟ್ಟಿದ್ದರು. ಘಟನೆಯಲ್ಲಿ  ಒಂದು ಬೈಕು, ಒಂದು ಆಟೋ ರಿಕ್ಷಾ, ಎರಡು ಮಾರುತಿ ವ್ಯಾನ್, ಒಂದು ಕಾರಿಗೆ ಜಖಂ ಗೊಳಿಸಿದ್ದಲ್ಲದೇ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಹಾನಿಗೊಳಿಸಿದ್ದಲ್ಲದೇ ದೇವಸ್ಥಾನವೊಂದರ ಕಂಪೌಂಡ್ ಕೂಡಾ ಹಾನಿಯಾಗಿತ್ತು. 

ನಗರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ತನಿಖೆಯನ್ನು ನಡೆಸಿದ ನ್ಯಾಯಾಲಯ ಆರೋಪಿತನಿಗೆ ವಿವಿಧ ಸೆಕ್ಷನ್‍ಗಳಡಿಯಲ್ಲಿ ಒಟ್ಟೂ 8 ತಿಂಗಳು ಸಜೆ ಹಾಗೂ ರೂ.3,500-00 ದಂಡ ವಿಧಿಸಿ ತೀರ್ಪು ನೀಡಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ವಿವೇಕ ಆರ್. ನಾಯ್ಕ ಅವರು ವಾದಿಸಿದ್ದರು.

Read These Next

ಭಟ್ಕಳ ಸೆಂಟ್ರಲ್ ಫತ್ರ್ ಕಮಿಟಿ ವತಿಯಿಂದ ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ ಸೆಂಟ್ರಲ್ ಫತ್ರ್ ಕಮಿಟಿ ವತಿಯಿಂದ ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...