ಕಾರವಾರ : ಏಷ್ಯಾದ ಅತಿದೊಡ್ಡ ಕಾರವಾರ ನೌಕಾನೆಲೆಗೆ ಗುರುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಭೇಟಿ ನೀಡಿದರು.
ಅರಗಾದ ಐಎನ್ಎಸ್ ಕದಂಬ ನೌಕಾನೆಲೆಗೆ ಭೇಟಿ ನೀಡಿದ ರಾಜನಾಥ ಸಿಂಗ್ ನೌಕಾನೆಲೆ ವಿವಿಧ ಕಾಮಗಾರಿ ವೀಕ್ಷಿಸಿದರು. ನೌಕಾನೆಲೆಯಲ್ಲಿ ಪ್ರಗತಿಯಲ್ಲಿರುವ ಎರಡನೇ ಹಂತದ ಕಾಮಗಾರಿಯ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಿಪ್ ಲಿಪ್ಟ್ ಸಾಮರ್ಥ್ಯದ ಬಗ್ಗೆ ತಿಳಿದುಕೊಂಡ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಸಚಿವರಿಗೆ ಮಾಹಿತಿ ನೀಡಿದರು.