ಭಯೋತ್ಪಾದಕ ಆರೋಪದಡಿ ಬಂಧಿತ ಭಟ್ಕಳದ ಸಿದ್ದಿಬಾಪ ನಿರಪರಾಧಿ; ಬಿಡುಗಡೆಗೆ ಆದೇಶಿಸಿದ ನ್ಯಾಯಾಲಯ

Source: S O News | By I.G. Bhatkali | Published on 2nd April 2023, 6:23 PM | Coastal News | State News | National News |

ಭಟ್ಕಳ: ನಿಷೇಧಿತ ಭಯೋತ್ಪಾದಕ ಸಂಘಟನೆ ಇಂಡಿಯನ್ ಮುಜಾಹಿದ್ದೀನ್ ಸದಸ್ಯನಾಗಿದ್ದು, ೨೦೦೭ರಿಂದ ದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧಿತನಾಗಿದ್ದ ಭಟ್ಕಳದ ಅಬ್ದುಲ್ ವಾಹಿದ್ ಸಿದ್ದಿಬಾಪ ಅವರನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿ  ಬಿಡುಗಡೆಯ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.

ಅಬ್ದುಲ್ ವಾಹಿದ್ ಅವರ ವಕೀಲ ಎಂಎಸ್ ಖಾನ್, ಈ ಕುರಿತಂತೆ  ಸಾಹಿಲ್ ಆನ್‌ಲೈನ್ ಕ್ಕೆ ಮಾಹಿತಿ ನೀಡಿದ್ದು, ನ್ಯಾಯಾಲಯವು ಆರೋಪಿ ಅಬ್ದುಲ್ ವಾಹಿದ್ ಸಿದ್ದಿಬಾಪರನ್ನು ಎಲ್ಲಾ ಆರೋಪಗಳಿಂದ ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

Delhi court acquitts Bhatkal youth after seven years

ವಿಚಾರಣಾಧೀನ ಕೈದಿಗಳಿಗೆ ಕಾನೂನು ನೆರವು ನೀಡುವ ಸಂಘಟನೆಯಾದ ಜಮಿಯತ್ ಉಲಮಾ ಹಿಂದ್ ಕಾನೂನು ನೆರವು ಸಮಿತಿಯ ಮುಖ್ಯಸ್ಥ ಗುಲ್ಜಾರ್ ಅಜ್ಮಿ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡುತ್ತಾ, ಏಳು ವರ್ಷಗಳ ಹಿಂದೆ ಆರೋಪಿಯನ್ನು ಭುಯೋತ್ಪಾದಕ ಚಟುವಟಿಕೆ ಆರೋಪದ ಮೇಲೆ ಬಂಧಿಸಲಾಗಿತ್ತು, ಈಗ ನ್ಯಾಯಾಲಯ ಅವರನ್ನು ಆರೋಪಮುಕ್ತಗೊಳಿಸಿ ಬಿಡುಗಡೆಗೊಳೀಸಿದೆ ಎಂದು ಮಾಹಿತಿ ನೀಡಿದ್ದಾರೆ. 

ಅಬ್ದುಲ್ ವಾಹಿದ್ ಸಿದ್ದಿಬಾಪಾ ಅವರನ್ನು ಮೇ ೨೦, ೨೦೧೬ ರಂದು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್.ಐ.ಎ ಬಂಧಿಸಿತ್ತು. ಇಂಡಿಯನ್ ಮುಜಾಹಿದ್ದೀನ್ ಮುಖ್ಯಸ್ಥ ಯಾಸೀನ್ ಭಟ್ಕಳ್ ಅವರ ಸಂಬಂಧಿ ಎಂದು ಆರೋಪಿಸಲಾಗಿತ್ತು. ದುಬೈನಲ್ಲಿ ನೆಲೆಸಿರುವಾಗ ಅಬ್ದುಲ್ ವಾಹಿದ್ ಅವರು ನಿಷೇಧಿತ ಸಂಘಟನೆಗೆ ಸೇರುವಂತೆ ಜನರ ಮನವೊಲಿಸುತ್ತಿದ್ದರು ಎಂಬ  ಆರೋಪವನ್ನೂ ಹೊರಿಸಲಾಗಿತ್ತು. ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ದುಬೈನಲ್ಲಿ ಹಣ ಸಂಗ್ರಹಿಸಿದ್ದ ಆರೋಪವೂ ಅವರ ಮೇಲಿತ್ತು. ಆದರೆ ಪಟಿಯಾಲ ಹೌಸ್ ಸೆಷನ್ ಕೋರ್ಟ್ ಅವರ ವಿರುದ್ಧ ಹೊರಿಸಲಾದ ಎಲ್ಲಾ ಆರೋಪಗಳಿಂದ ಅವರನ್ನು ಖುಲಾಸೆಗೊಳಿಸಿದೆ ಮತ್ತು ಅವರನ್ನು ಬಿಡುಗಡೆ ಮಾಡಲು ಆದೇಶಿಸಿದೆ.

ಅಬ್ದುಲ್ ವಾಹಿದ್ ಬಂಧನದ ಮೊದಲ ದಿನದಿಂದ ಪ್ರಕರಣವನ್ನು ನಿರ್ವಹಿಸುತ್ತಿದ್ದ ಜಮೀಯತುಲ್ ಉಲಮಾದ ವಕೀಲ ಎಂ.ಎಸ್.ಖಾನ್, ತನ್ನ ಕಕ್ಷಿದಾರನು ಸಂಪೂರ್ಣವಾಗಿ ನಿರಪರಾಧಿ ಮತ್ತು ಸುಳ್ಳು ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದಾನೆ ಎಂಬುದು ತಿಳಿದಿತ್ತು.  ಈಗ ಆತ ನಿರಪರಾಧಿ ಎಂದು ಸಾಬೀತಾಗಿರುವುದು ಸಂತೋಷವಾಗಿದೆ ಎಂದು ಹೇಳಿದರು.  ನ್ಯಾಯಾಲಯವು ಅಬ್ದುಲ್ ವಾಹಿದ್ ಬಿಡುಗಡೆಗೆ ಆದೇಶಿಸಿದ್ದು, ಸೋಮವಾರ ಜೈಲಿನಿಂದ ಹೊರಬರಲಿದ್ದಾರೆ ಎಂದು  ನ್ಯಾಯಾವಾದಿ ಎಂ.ಎಸ್.ಖಾನ್ ಹೇಳಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...