ರೈತರ ಪ್ರತಿಭಟನೆ: ಮಾ.12ರವರೆಗೆ ದಿಲ್ಲಿಯಲ್ಲಿ ಸಭೆಗೆ ನಿಷೇಧ; ರಾಷ್ಟ್ರರಾಜಧಾನಿಗೆ ಟ್ರ್ಯಾಕ್ಟರ್‌ಗಳು ಮತ್ತು ಟ್ರಾಲಿಗಳ ಪ್ರವೇಶಕ್ಕೂ ತಡೆ

Source: S O News | By I.G. Bhatkali | Published on 13th February 2024, 1:30 AM | National News |

ಹೊಸದಿಲ್ಲಿ: ಹೊಸದಿಲ್ಲಿಯಲ್ಲಿ ಮಾರ್ಚ್ 12ರವರೆಗೆ ದೊಡ್ಡ ಸಭೆಗಳನ್ನು ನಡೆಸುವುದನ್ನು ಮತ್ತು ರಾಷ್ಟ್ರ ರಾಜಧಾನಿಗೆ ಟ್ರ್ಯಾಕ್ಟರ್‌ಗಳು ಮತ್ತು ಟ್ರಾಲಿಗಳು ಪ್ರವೇಶಿಸುವುದನ್ನು ದಿಲ್ಲಿ ಪೊಲೀಸರು ಸೋಮವಾರ ನಿಷೇಧಿಸಿದ್ದಾರೆ.

ಮಂಗಳವಾರ ದಿಲ್ಲಿಯಲ್ಲಿ ರೈತರು ನಡೆಸಲು ಉದ್ದೇಶಿಸಿರುವ ಪ್ರತಿಭಟನಾ ಮೆರವಣಿಗೆ ಮತ್ತು ಸಭೆಗಳಿಗೆ ಒಂದು ದಿನ ಮೊದಲು ಪೊಲೀಸರು ಈ ಕ್ರಮ ತೆಗೆದುಕೊಂಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಮ್‌ಎಸ್‌ಪಿ)ಗೆ ಕಾನೂನು ತರಬೇಕು ಎನ್ನುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ 200ಕ್ಕೂ ಅಧಿಕ ರೈತರ ಸಂಘಟನೆಗಳು ದಿಲ್ಲಿಗೆ ರೈತರ ಮೆರವಣಿಗೆ ಒಯ್ಯಲು ನಿರ್ಧರಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ತಮ್ಮ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಮ್‌ಎಸ್‌ಪಿ)ಯನ್ನು ಖಾತರಿಪಡಿಸುವ ಕಾನೂನೊಂದನ್ನು ತರಬೇಕು ಎನ್ನುವುದು ಪ್ರತಿಭಟನೆಗೆ ಕರೆ ನೀಡಿರುವ ರೈತರ ಪ್ರಮುಖ ಬೇಡಿಕೆಯಾಗಿದೆ. 2021ರಲ್ಲಿ, ಕೃಷಿ ಕಾನೂನುಗಳ ವಿರುದ್ದದ ತಮ್ಮ ಬೃಹತ್ ಪ್ರತಿಭಟನೆಯನ್ನು ಹಿಂದೆಗೆದುಕೊಳ್ಳಲು ಒಪ್ಪಿದಾಗ ರೈತರು ಹಾಕಿದ ಷರತ್ತುಗಳಲ್ಲಿ ಇದೂ ಒಂದಾಗಿತ್ತು.

ಸರಕಾರ ಸ್ವಾಧೀನಪಡಿಸುವ ರೈತರ ಜಮೀನುಗಳಿಗೆ ಗರಿಷ್ಠ ಪರಿಹಾರ ನೀಡಬೇಕು ಎನ್ನುವುದು ರೈತರ ಇನ್ನೊಂದು ಪ್ರಮುಖ ಬೇಡಿಕೆಯಾಗಿದೆ. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕು, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ ನೀಡಬೇಕು, ರೈತರ ಸಾಲ ಮನ್ನಾ ಮಾಡಬೇಕು, ರೈತರ ವಿರುದ್ದದ ಪೊಲೀಸ್ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು ಮತ್ತು ಲಖಿಮ್‌ಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎನ್ನುವುದು ಅವರ ಇತರ ಬೇಡಿಕೆಗಳಾಗಿವೆ.

ರಾಜಕೀಯ, ಸಾಮಾಜಿಕ ಅಥವಾ ಇತರ ಯಾವುದೇ ಕಾರಣಗಳಿಗಾಗಿ ಮೆರವಣಿಗೆಗಳು, ಪ್ರದರ್ಶನಗಳು, ಸಭೆಗಳು ಅಥವಾ ಕಾಲ್ನಡಿಗೆ ಜಾಥಾಗಳಲ್ಲಿ ಪಾಲ್ಗೊಳ್ಳುವುದನ್ನು ಅಥವಾ ಅವುಗಳನ್ನು ಸಂಘಟಿಸುವುದನ್ನು 'ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ' ಎಂದು ದಿಲ್ಲಿ ಪೊಲೀಸ್ ಕಮಿಶನರ್ ಸಂಜಯ್ ಅರೋರ ಸೋಮವಾರ ಬಿಡುಗಡೆ ಮಾಡಿರುವ ಆದೇಶ ತಿಳಿಸಿದೆ.

"ದಿಲ್ಲಿ/ಹೊಸದಿಲ್ಲಿಗೆ ಪ್ರವೇಶಿಸುವ ಮೆರವಣಿಗೆಯಲ್ಲಿ ಭಾಗವಹಿಸುವ ಜನರಿಂದ ವ್ಯಾಪಕ ಉದ್ವಿಗ್ನತೆ, ಸಾರ್ವಜನಿಕ ತೊಂದರೆ, ಸಾಮಾಜಿಕ ಅಶಾಂತಿ ಮತ್ತು ಹಿಂಸೆಯ ಅಪಾಯವಿದೆ' ಎಂದು ಆದೇಶ ತಿಳಿಸಿದೆ.

"ಎಲ್ಲಕ್ಕಿಂತ ಮುಖ್ಯವಾಗಿ, 2020ರ ರೈತ ಆಂದೋಲನದ ಮತ್ತು ಅದರಿಂದ ಹುಟ್ಟಿಕೊಂಡ ಗಂಭೀರ ಕಾನೂನು ಮತ್ತು ವ್ಯವಸ್ಥೆ ಸಮಸ್ಯೆಯ ಅನುಭವ ಹಾಗೂ ಗುಪ್ತಚರ ಸಂಸ್ಥೆಗಳಿಂದ ಸ್ವೀಕರಿಸಿದ ಮಾಹಿತಿಗಳನ್ನು ಆಧರಿಸಿ, ಹಿಂದಿನ ಪರಿಸ್ಥಿತಿಯು ಮರುಕಳಿಸದಂತೆ ತಡೆಯಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದು

ಅಗತ್ಯವಾಗಿದೆ'' ಎಂದು ಆದೇಶದಲ್ಲಿ ಹೇಳಲಾಗಿದೆ. ಇದಕ್ಕಿಂತ ಒಂದು ದಿನ ಮೊದಲು, ಅಂದರೆ ರವಿವಾರ ದಿಲ್ಲಿ ಪೊಲೀಸರು ಉತ್ತರಪ್ರದೇಶದ ಜೊತೆಗಿನ ಗಡಿಗಳಲ್ಲಿ ಕ್ರಿಮಿನಲ್ ಪ್ರೊಸೀಜ‌ರ್ ಕೋಡ್ (ಸಿಆ‌ರ್ಪಿಸಿ)ನ 144ನೇ ವಿಧಿಯಂತೆ ನಿಷೇಧಾಜ್ಞೆ ಹೇರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...