ದೆಹಲಿ: ಹತ್ಯೆಗೊಳಗಾದ ಅಝೀಮ್ ನ ಸಹೋದರರ ಶಿಕ್ಷಣದ ಜವಾಬ್ದಾರಿ ವಹಿಸಿದ ಎಸ್.ಐ.ಓ

Source: sonews | By Staff Correspondent | Published on 28th October 2018, 4:43 PM | National News | Don't Miss |

ಹೊಸದಿಲ್ಲಿ: ಮೈದಾನದಲ್ಲಿ ಆಟವಾಡುತ್ತಿದ್ದ ವೇಳೆ ಸ್ಥಳೀಯ ಯುವಕರ ಗುಂಪೊಂದರಿಂದ ಕಳೆದ ಗುರುವಾರ ಹತ್ಯೆಗೊಳಗಾದ ದಾರುಲ್ ಉಲೂಮ್ ಫರೀದಿಯಾ ಮದ್ರಸಾದ ವಿದ್ಯಾರ್ಥಿ ಅಝೀಮ್ ನ ಮನೆಗೆ ಇಂದು ಭೇಟಿ ನೀಡಿದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾದ ನಹಾಸ್ ಮಾಲಾ, ಅಝೀಮ್ ನ ಇಬ್ಬರು ಸಹೋದರರ ಮುಂದಿನ ಶಿಕ್ಷಣದ ಸಂಪೂರ್ಣ ಜವಾಬ್ದಾರಿಯನ್ನು ಎಸ್.ಐ.ಓ ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ಹರಿಯಾಣದ ಮೇವಾಟ್ ನಲ್ಲಿರುವ ಮೃತ ವಿದ್ಯಾರ್ಥಿ ಅಝೀಮ್ ನ ಮನೆಗೆ ಇಂದು ಭೇಟಿ ನೀಡಿದ ಬಳಿಕ ಈ ವಿಷಯವನ್ನು ಅವರು ತಿಳಿಸಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿದ ನಹಾಸ್ ಮಾಲಾ, ”ಮೇವತ್ ನಲ್ಲಿರುವ ಅಝೀಮ್ ನ ಮನೆಗೆ ಭೇಟಿ ಕೊಟ್ಟೆವು. ಅಝೀಮ್ ನ ಇಬ್ಬರು ಸಹೋದರರಾದ ಮುಸ್ತಫಾ ಹಾಗೂ ಮುಸ್ತಖೀಮ್ ನ ಸ್ನಾತಕೋತ್ತರ ಶಿಕ್ಷಣದವರೆಗಿನ ಸಂಪೂರ್ಣ ಜವಾಬ್ದಾರಿಯನ್ನು ಎಸ್.ಐ.ಓ. ನೋಡಿಕೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಈ ಮಧ್ಯೆ ಅರವಿಂದ್ ಕೇಜ್ರೀವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರವು ಅಝೀಮ್ ನ ಕುಟುಂಬಕ್ಕೆ ರೂ. 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.

ದೆಹಲಿಯ ದಾರುಲ್ ಉಲೂಮ್ ಫರೀದಿಯಾ ಮದ್ರಸಾದ ವಿದ್ಯಾರ್ಥಿಯಾಗಿದ್ದ ಅಝೀಮ್, ತನ್ನ ಇತರ ಸಹಪಾಠಿಗಳೊಂದಿಗೆ ಕಳೆದ ಗುರುವಾರ ಮದ್ರಸಾದ ಬಳಿ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಸ್ಥಳೀಯ ಯುವಕರ ಗುಂಪೊಂದು ಅಝೀಮ್ ನನ್ನು ಮೈದಾನದಲ್ಲಿ ದೂಡಿದ ಪರಿಣಾಮವಾಗಿ ಪ್ರಜ್ಞಾಹೀನನಾದ ಬಳಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದನು. ಈ ಘಟನೆಯ ಸಂಬಂಧ ತನಿಖೆ ನಡೆಸುತ್ತಿರುವ ದೆಹಲಿಯ ಪೊಲೀಸರು, ಸ್ಥಳೀಯ ನಾಲ್ವರು ಯುವಕರನ್ನು ಬಂಧಿಸಿದ್ದಾರೆ.

ಖಾಲಿಯಾದ ಮದ್ಯದ ಬಾಟಲಿಗಳನ್ನು ಎಸೆಯುವ ಮೂಲಕ ಕೆಲವು ಸ್ಥಳೀಯ ನಿವಾಸಿಗಳು ಮದ್ರಸಾದ ವಿದ್ಯಾರ್ಥಿಗಳಿಗೆ ಹಾಗೂ ಮದ್ರಸಾಕ್ಕೆ ನಿರಂತರ ತೊಂದರೆ ನೀಡುತ್ತಿದ್ದುದಾಗಿ ಮದ್ರಸಾದ ಅಧ್ಯಾಪಕರು ಆರೋಪಿಸಿದ್ದಾರೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...