ಸ್ಟಾಫ್‌ ನರ್ಸ್ ಗಳ ಬೇಡಿಕೆ ಈಡೇರಿಕೆಗೆ ಕ್ರಮ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ

Source: uni | Published on 3rd August 2020, 12:44 AM | State News | Don't Miss |

 

ಬೆಂಗಳೂರು: ಶನಿವಾರ ಬಿಎಂಸಿಆರ್ ಐ ಮತ್ತು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಪ್ರತಿಭಟಿಸಿದ ಸ್ಟಾಫ್ ನರ್ಸ್ ಗಳ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳೊಂದಿಗೆ ಕೂಡಲೇ ಚರ್ಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.
ಕೋವಿಡ್ ಕಾರ್ಯದಲ್ಲಿ ನಿರತರಾಗಿರುವ ನರ್ಸ್ ಗಳು ವಿವಿಧ ಸೌಲಭ್ಯಗಳನ್ನು ನೀಡಬೇಕೆಂದು ಆಗ್ರಹಿಸಿ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದರು. 
ಇದಕ್ಕೆ ಕೂಡಲೇ ಸ್ಪಂದಿಸಿದ ಸಚಿವ ಡಾ.ಕೆ.ಸುಧಾಕರ್, "ಸಿಬ್ಬಂದಿಯ ಬೇಡಿಕೆಗಳ ಬಗ್ಗೆ ಕೂಡಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಚರ್ಚೆ ಮಾಡಲಾಗುವುದು. ಆದಷ್ಟು ಬೇಗನೆ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು", ಎಂದು ತಿಳಿಸಿದ್ದಾರೆ. "ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಸಿಬ್ಬಂದಿ ಕೆಲಸಕ್ಕೆ ಮರಳಿ ಕಾರ್ಯಪ್ರವೃತ್ತರಾಗಬೇಕು. 
ಸಿಬ್ಬಂದಿಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಈ ಸಮಯದಲ್ಲಿ ಎಲ್ಲವನ್ನೂ ಗಮನದಲ್ಲಿರಿಸಿಕೊಂಡು ಸರ್ಕಾರವು ಸಿಬ್ಬಂದಿಯ ಬೇಡಿಕೆಗಳನ್ನು ಈಡೇರಿಸಲಿದೆ", ಎಂದು ಸಚಿವರು ಆಶ್ವಾಸನೆ ನೀಡಿದರು.
ಈ ಕುರಿತು ಸಚಿವರು ಟ್ವೀಟ್ ಮಾಡಿದ್ದಾರೆ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...