ಬಾಲಕಾರ್ಮಿಕಳನ್ನು ರಕ್ಷಸಿದ ಕಾರ್ಮಿಕ ಇಲಾಖೆ

Source: so news | Published on 19th March 2020, 12:11 AM | State News | Don't Miss |

 

ಶಿವಮೊಗ್ಗ:ಮಕ್ಕಳ ಸಹಾಯವಾಣಿ ದೂರಿನ ಮೇರೆಗೆ ಮಾರ್ಚ್ 17 ರಂದು ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳ ಜಂಟಿ ಕಾರ್ಯಾಚರಣೆಯಲ್ಲಿ ಶಿವಮೊಗ್ಗ ಬಾಪೂಜಿ ನಗರದ ಮನೆಯೊಂದರಲ್ಲಿ 14 ವರ್ಷದ ಬಾಲಕಿಯನ್ನು ಸುಮಾರು 5 ತಿಂಗಳಿಂದ ಮನೆ ಕೆಲಸಕ್ಕೆ ನೇಮಿಸಿಕೊಂಡಿರುವುದನ್ನು ಪತ್ತೆಹಚ್ಚಿ, ರಕ್ಷಣೆ ಮಾಡಲಾಗಿದೆ. ಹಾಗೂ ಆಕೆಯನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿ ಬಾಲಕಿಯ ಪೋಷಣೆ ಮತ್ತು ರಕ್ಷಣೆಗಾಗಿ ಸರ್ಕಾರಿ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಲಾಯಿತು.
ಮಾಲೀಕರಿಗೆ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ಕುರಿತು ಅರಿವು ಮೂಡಿಸಿ, ಮಾಲೀಕರ ವಿರುದ್ದ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಿಸಲಾಯಿತು
ಈ ರಕ್ಷಣಾ ತಂಡದಲ್ಲಿ ಎಂ.ಪಿ ವಿಶ್ವನಾಥ ಕಾರ್ಮಿಕ ಅಧಿಕಾರಿಗಳು, ಪಿ ಭೀಮೆಶ್, ಕಾರ್ಮಿಕ ನಿರೀಕ್ಷಕರು 2ನೇ ವೃತ್ತ, ಶಿವಮೊಗ್ಗ, ರಘುನಾಥ ಎ,ಎಸ್ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನೆ ಶಿವಮೊಗ್ಗ, ಪುನಿತ್ ಕುಮಾರ್ ಇ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಹೆಚ್ ರಾಜೇಶ್, ಸಿ.ಆರ್.ಪಿ, ಸಾರ್ವಜನಿಕ ಶಿಕ್ಷಣಾ ಇಲಾಖೆ ಅಶೋಕ್ ಕೆ.ಬಿ, ಆಪ್ತ ಸಮಾಲೋಚಕರು, ಮಕ್ಕಳ ಸಹಾಯ ವಾಣಿ, ತಿಮ್ಮೇಶಪ್ಪ, ಹೆಡ್ ಕಾನ್ಸ್‍ಸ್ಟೇಬಲ್, ಕೋಟೆ ಪೋಲೀಸ್ ಠಾಣೆ, ಶಿವಮೊಗ್ಗ ಇವರುಗಳು ಭಾಗವಹಿಸಿದ್ದರು ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...