ಮಂಡ್ಯ : ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್ ವ್ಯಕ್ತಿಗಳೊಂದಿಗೆ ಜೂಮ್ ವಿಡಿಯೋ ಮೂಲಕ ನೇರವಾಗಿ ಕೋವಿಡ್ ಸೋಂಕಿತರೊಂದಿಗೆ ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್ . ಅಶ್ವಥಿ ಅವರು ಸಂವಾದಿಸಿ ಮುಕ್ತವಾಗಿ ಮಾತನಾಡಿ ಅವರ ಸಮಸ್ಯೆಗಳನ್ನು ಆಲಿಸಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಮಳವಳ್ಳಿ, ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ಮದ್ದೂರು, ನಾಗಮಂಗಲ ಮತ್ತು ಪಾಂಡವಪುರ ತಾಲ್ಲೂಕಿನ ಆರೋಗ್ಯ ಅಧಿಕಾರಿಗಳಿಗೆ ಅಲ್ಲಿನ ಕೋವಿಡ್ ಕೇಂದ್ರಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡು ಕ್ರಮಗಳನ್ನು ವಿಚಾರಿಸಿದರು ಹಾಗೂ ಕೋವಿಡ್ ವ್ಯಕ್ತಿಗಳನ್ನು ನೇರವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಕೋವಿಡ್ ಸೋಂಕಿತರು ರೋಗಿಗಳು ಇಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದಾರೆ ಮತ್ತು ಊಟ, ಬಿಸಿ ನೀರಿನ ವ್ಯವಸ್ಥೆ, ಸ್ವಚ್ಛತೆ ಮತ್ತು ಉತ್ತಮವಾದ ಆಹಾರದ ವ್ಯವಸ್ಥೆಯನ್ನು ಮಾಡಿದ್ದಾರೆಂದು ಎಂದು ಮುಕ್ತವಾಗಿ ಮಾತನಾಡಿದರು.
ಕೋವಿಡ್ ವ್ಯಕ್ತಿಗಳಿಗೆ ಉತ್ತಮ ಆಹಾರ ನೀಡಿ ಅವರಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಎಲ್ಲಾ ತಾಲ್ಲೂಕಿನ ತಹಶೀಲ್ದಾರರಿಗೆ ಸೂಚಿಸಿದರು.
ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ರೀತಿಯ ಸೌಲಭ್ಯಗಳ ವ್ಯವಸ್ಥೆ, ವೇಂಟಿಲೆಟರ್ಸ್, ಹಾಸಿಗೆ ವ್ಯವಸ್ಥೆಯ ಮತ್ತು ಇತರ ವ್ಯವಸ್ಥೆಗಳ ಬಗ್ಗೆ ಪ್ರತಿ ತಾಲ್ಲೂಕಿನಲ್ಲಿನ ತಹಶೀಲ್ದಾರರ ಜತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಮಾತನಾಡಿ ಸೂಚಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶೈಲಜಾ, ಮಿಮ್ಸ್ ನಿರ್ದೇಶಕರಾದ ಹರೀಶ್ , ಜಿಲ್ಲಾ ಸರ್ವೇಕ್ಷಣಧಿಕಾರಿಗಳಾದ ಸಂಜಯ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿರಿದ್ದರು.