ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ವಿಭಿನ್ನ ಸ್ವರೂಪದ ಪೂರ್ವ ಘಟ್ಟದ ಕಳಿಂಗ ಕಪ್ಪೆ ಪತ್ತೆ

Source: sonews | By Staff Correspondent | Published on 27th August 2020, 5:06 PM | Special Report | Don't Miss |

ಭಾರತದ ಪೂರ್ವ ಘಟ್ಟದಲ್ಲಿ ಮಾತ್ರ ಕಾಣಸಿಗುತ್ತದೆಂದು ನಂಬಲಾಗಿದ್ದ ಕಳಿಂಗ ಕಪ್ಪೆ ಪಶ್ಚಿಮ ಘಟ್ಟ ಪ್ರದೇಶದಲ್ಲೂ ಪತ್ತೆಯಾಗಿದೆ. ಜೀವವೈವಿಧ್ಯ ಸಂಶೋಧಕ ಶಿರಸಿ ತಾಲೂಕಿನ ವರ್ಗಾಸರದ ಅಮಿತ ಹೆಗಡೆ ಹಾಗು ತಂಡ ಈ ಪತ್ತೆ ಕಾರ್ಯ ನಡೆಸಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ’ಸಂತಾನೋತ್ಪತ್ತಿ ನಡವಳಿಕೆ ಮತ್ತು ಜೀವ ಸಂವಹನ ಪ್ರಯೋಗಾಲಯದ ಪ್ರಾಣಿಶಾಸ್ತ್ರ ವಿಭಾಗ’ದಲ್ಲಿ ಪಿ.ಎಚ್‍ಡಿ ಅಧ್ಯಯನ ನಡೆಸುತ್ತಿರುವ ಇವರು ಪ್ರೋ.ಗಿರೀಶ ಕಾಡದೇವರು ಅವರ ಮಾರ್ಗದರ್ಶನದಲ್ಲಿ ಹಾಗೂ ಪುಣೆಯ ಝೂವಾಲಾಜಿಕಲ್ ಸರ್ವೆ ಆಫ್ ಇಂಡಿಯಾದ (ZSI) ವಿಜ್ಞಾನಿ ಕೆ.ಪಿ.ದಿನೇಶ ರವರ ಸಹಯೋಗದಲ್ಲಿ ಈ ಕಪ್ಪೆ ಪತ್ತೆ ಹಚ್ಚಿದ್ದಾರೆ. ಶಿರಸಿಯ ಭಾಗದಲ್ಲಿ ಈ ವಿಶಿಷ್ಟ ತಳಿಯ ಕಪ್ಪೆ ಪತ್ತೆಯಾಗಿದ್ದು, ’ಜೀವವೈವಿಧ್ಯ-ಸಮೃದ್ಧ ಪಶ್ಚಿಮ ಘಟ್ಟಗಳಲ್ಲಿ ಕಂಡುಬರುತ್ತದೆ, ಈ ಸಂಶೋಧನೆಯು ಕೇವಲ ಒಂದು ಶ್ರೇಣಿಯ ವಿಸ್ತರಣೆಯಲ್ಲ ಆದರೆ ಇದು ರೂಪವಿಜ್ಞಾನದಲ್ಲಿ ಸಂಪೂರ್ಣವಾಗಿ ಭಿನ್ನವಾಗಿ ಕಾಣುವಂತಹ ಶೋಧ ಕಾರ್ಯವಾಗಿದೆ. ಈ ಕಪ್ಪೆಯನ್ನು ಪ್ರುಧ್ವಿ ನೇತೃತ್ವದ ಸಂಶೋಧಕರ ತಂಡದಿಂದ 2018 ರಲ್ಲಿ ಪೂರ್ವ ಘಟ್ಟದ ಉತ್ತರ ಭಾಗವಾದ ಓರಿಸ್ಸಾ ಹಾಗೂ ಆಂಧ್ರಪ್ರದೇಶದಲ್ಲಿ ಪತ್ತೆ ಮಾಡಲಾಗಿತ್ತು. ಇದು ಪೂರ್ವ ಘಟ್ಟದಲ್ಲಿ ಮಾತ್ರ ಕಂಡುಬರವ ಪ್ರಭೇದ ಎಂಬ ನಂಬಿಕೆ ಈವರೆಗೆ ಇತ್ತು. ಅಚ್ಚರಿ ಎಂಬಂತೆ ಈ ಕಳಿಂಗ ಜಾತಿಯ ಕಪ್ಪೆ ಇದೇ ಮೊದಲ ಬಾರಿಗೆ ಪಶ್ಚಿಮ ಘಟ್ಟದಲ್ಲಿ ಕಂಡುಬಂದಿರುವುದು ನಿಜಕ್ಕೂ ವಿಸ್ಮಯ ಮೂಡಿಸಿದೆ.

ಪಶ್ಚಿಮ ಘಟ್ಟದಲ್ಲಿ ಕಂಡುಬಂದ ಕಳಿಂಗ ಕಪ್ಪೆ ಕೇವಲ ಶ್ರೇಣಿ ವಿಸ್ತರಣೆಯ ಸಂಶೋಧನೆಯಲ್ಲ, ಬದಲಾಗಿ ತನ್ನ ದೇಹ ವಿನ್ಯಾಸದಲ್ಲಿ ಸಂಪೂರ್ಣವಾಗಿ ಭಿನ್ನವಾಗಿ ಕಂಡುಬರುವ ವ್ಯವಂಶಿಕವಾಗಿ ಪೂರ್ವ ಘಟ್ಟದ ಕಳಿಂಗ ಜಾತಿಯ ಕಪ್ಪೆಯಾಗಿದೆ. ಈ ದೊಡ್ಡ ಗಾತ್ರದ ಕ್ರಿಕೆಟ್ ಕಪ್ಪೆ ಹೆಚ್ಚಿನ ಫಿನೋಟೈಪಿಕ್ ಪ್ಲಾಸ್ಟಿಟಿಯನ್ನು  "Morphological Phenotypic Plasticity (MPP) ತೋರಿಸುತ್ತದೆ, ಅಂದರೆ ವ್ಯವಂಶಿಕವಾಗಿ ಒಂದೇ ಜಾತಿಯ ಕಪ್ಪೆಗಳು ನೋಡಲು ಬೇರೆ ಬೇರೆ ಪ್ರಕಾರವಾಗಿ ಕಂಡುಬರುತ್ತವೆ. ಈ ಸಂಶೋಧನೆಯಲ್ಲಿ ಪೂರ್ವ ಹಾಗೂ ಪಶ್ಚಿಮ ಘಟ್ಟಗಳ್ಳಲ್ಲಿ ಕಂಡು ಬರುವ ಕಳಿಂಗ ಕಪ್ಪೆಗಳು ಅನುವಂಶಿಕವಾಗಿ ಒಂದೇ ಆಗಿದ್ದು ನೋಡಲು ರೂಪವಿಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳ್ಳನ್ನು ತೋರಿಸುತ್ತಿವೆ.

Morphological Phenotypic Plasticity (MPP) ಎಂದರೆ ನೈಸರ್ಗಿಕ ಪರಿಸರದ ವ್ಯತ್ಯಾಸಗಳು ಅಥವಾ ಪ್ರಚೋದಕಗಳಿಗೆ ಪ್ರತಿಕ್ರಿಯೆಯಾಗಿ ತೀವೃವಾದ ರೂಪವಿಜ್ಞಾನದ ದೇಹ ವ್ಯತ್ಯಾಸಗಳನ್ನು ತೋರಿಸುವ ಜೀವಿ ಸಾಮಥ್ರ್ಯ. ಸಂಶೋಧಕರಾದ ಅಮಿತ್ ರವರು ಈವರೆಗೆ ನಡೆಸಿರುವ ಅಧ್ಯಯನದ ಅನುಭವದಲ್ಲಿ ಹೇಳುವುದಾದರೆ, ’ಪಶ್ಚಿಮ ಘಟ್ಟದಲ್ಲಿ ನಾನು ಹಲವಾರು ಬಾರಿ ಈ ಕಪ್ಪೆಯನ್ನು ಕಂಡಿದ್ದೇನೆ. ಇದು ಪಶ್ಚಿಮ ಘಟ್ಟದಿಂದ ತಿಳಿದಿರುವ ಫೆಜೆವರಾಯ/ಮಿನರ್ವರಿಯಾ ಪ್ರಭೇದಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. 21 ನೇ ಶತಮಾನದ ಉಂಟಾಗುತ್ತಿರುವ ಹವಾಮಾನ ವೈಪರಿತ್ಯದಲ್ಲಿ ಅನೇಕ ಜೀವವೈವಿಧ್ಯಗಳನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಆದಾಗ್ಯೂ ಪ್ರಸ್ತುತ ನಮ್ಮ ದೇಶದಲ್ಲಿ ಹೊಸ ಪ್ರಭೇದಗಳು ಇತ್ತೀಚೆಗಷ್ಟೇ ಬೆಳಕಿಗೆ ಬರುತ್ತಿವೆ. ಈ ಹೊಸ ಅನ್ವೇಷಣೆ ಸಕಾರಾತ್ಮಕವಾಗಿದೆ. ಆದರೆ ಹೊಸ ಜಾತಿಗಳು, ಪ್ರಭೇದಗಳು ಹೇಗೆ ವರ್ತಿಸುತ್ತವೆ, ಅವುಗಳ ಸ್ವಭಾವಗಳೇನು ಅಥವಾ ವಿಭಿನ್ನ ಜೈವಿಕ ಭೌಗೋಳಿಕ ಶ್ರೇಣಿಗಳಿಗೆ ಅವು ಹೇಗೆ ಹೊಂದಿಕೊಳ್ಳುತ್ತವೆ ಎಂಬುದರ ಬಗ್ಗೆ ನಮಗೆ ಇನ್ನೂ ಹೆಚ್ಚು ತಿಳಿದಿಲ್ಲ. ಇವುಗಳ ಬಗ್ಗೆ ಕಡಿಮೆ ತಿಳಿದಷ್ಟೂ ಅವುಗಳನ್ನು ಸಂರಕ್ಷಿಸುವುದು ನಮಗೆ ಕಷ್ಟ.

ಕ್ರಿಕೆಟ್ ಕಪ್ಪೆ ಕುಲದೊಳಗಿನ ಜೀವಿವರ್ಗೀಕರಣದ ಅಸ್ಪಷ್ಟತೆಯ ಬಗ್ಗೆ ಹಾಗೂ ಸಂಕೀರ್ಣತೆಯ ಬಗ್ಗೆ ನಾವು ಪ್ರಕಟಿಸಿದ ಸಂಶೋಧನಾ ಪ್ರಬಂಧ ಹೆಚ್ಚಿನ ಸಂಖ್ಯೆಯ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇಲ್ಲಿಯವರೆಗೆ ವಿವರಿಸಿದ ಹೆಚ್ಚಿನ ಪ್ರಭೇದಗಳು ಅವುಗಳನ್ನು ಪತ್ತೆ ಮಾಡಿದ ಪ್ರದೇಶದಿಂದ ಮಾತ್ರ ತಿಳಿದು ಬಂದಿದೆ ಮತ್ತು ಹಳೆಯ ಪ್ರಕಾರದ ಹೆಚ್ಚಿನ ಮಾದರಿಗಳು ಕಳೆದುಹೋಗಿವೆ. ಈ ಸಮಸ್ಯೆಯನ್ನು ಅಥವಾ ಅನಿಶ್ಚಿತತೆಯನ್ನು ಪರಿಹರಿಸಲು ಅಥವಾ ಇವುಗಳ ಬಗ್ಗೆ ಹೆಚ್ಚು ಗಮನಹರಿಸುವ ತುರ್ತು ಅವಶ್ಯಕತೆಯಿದೆ. ಈಶಾನ್ಯ ಭಾರತ ಮತ್ತು ಪಶ್ಚಿಮ ಘಟ್ಟಗಳು ಜೀವವೈವಿಧ್ಯತೆಯಿಂದ ಸಮೃದ್ಧವಾಗಿವೆ. ಈ ಪ್ರದೇಶಗಳನ್ನು ಜೀವವೈವಿಧ್ಯತೆಯ ತಾಣಗಳೆಂದು ಪರಿಗಣಿಸಲಾಗುತ್ತದೆ. ಹಾಗಿದ್ದರೆ ಪೂರ್ವ ಘಟ್ಟಗಳು ಜೀವವೈವಿಧ್ಯತೆಯ ವಿನಿಮಯಕ್ಕಾಗಿ ಈ ಎರಡರ ನಡುವಿನ ಸಂಪರ್ಕ ಸೇತುವೆಯೆ? ಎಂಬ ಪ್ರಶ್ನೆಯನ್ನು ಈ ಸಂಶೋಧನಾ ಪ್ರಬಂಧ ಹುಟ್ಟುಹಾಕುತ್ತದೆ.

ಮೂವರು ಸಂಶೋಧಕರು ಸೇರಿ ಕೈಗೊಂಡಿರುವ ಈ ಅಧ್ಯಯನದ ಜೊತೆಗೆ ಅವರ ಅಭಿಪ್ರಾಯ ಏನೆಂದರೆ ಹಳೆಯ ತಲೆಮಾರು ಹಾಗೂ ಹೊಸ ತಲೆಮಾರಿನ ಸಂಶೋಧಕರು, ವಿಜ್ಞಾನಿಗಳು ಕಪ್ಪೆಗಳ ಮೇಲೆ ನಡೆಸಿರುವ ಹಲವಾರು ಸಂಶೋಧನೆಗಳಲ್ಲಿ ಕೈಜೋಡಿಸಿದ್ದರೂ, ಕಪ್ಪೆಗಳನ್ನು ಅರಿಯುವ ಜೊತೆಗೆ ಅವುಗಳ ಸಂರಕ್ಷಣೆಯಲ್ಲಿ ಇನ್ನೂ ನಮ್ಮದು ಮೊದಲ ಹೆಜ್ಜೆ. ಈ ಸಂಶೋಧನೆಯು ಅಂತರರಾಷ್ಟ್ರೀಯ ಖ್ಯಾತಿಯ ಪ್ರತಿಷ್ಠಿತ ’ಝೂಟ್ಯಾಕ್ಸಾ‘ (Zootaxa) ಎಂಬ ಜರ್ನಲ್‍ನಲ್ಲಿ ಪುರಾವೆಯೊಂದಿಗೆ ಪ್ರಕಟಗೊಂಡಿದೆ.
   
ಅಮಿತ ಹೆಗಡೆ
(9480556122)

ಪಶ್ಚಿಮ ಘಟ್ಟದಲ್ಲಿ ಪತ್ತೆಯಾದ ಕಳಿಂಗ ಕಪ್ಪೆ (ಚಿತ್ರ ಕೃಪೆ-ಅಮಿತ ಹೆಗಡೆ)

 


ಪೂರ್ವ ಘಟ್ಟದಲ್ಲಿ ಮೊದಲು ಕಂಡುಬಂದ ಕಳಿಂಗ ಕಪ್ಪೆ (ಚಿತ್ರ ಕೃಪೆ-ಪೃಥ್ವಿರಾಜ್)

Read These Next

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...