ಭಟ್ಕಳ: ಪ್ರಥಮ ಪಿ.ಯು.ಸಿ ಓದುತ್ತಿರುವ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಶಿರಾಲಿ ಹರಕಲಿ ಬಳಿ ನಡೆದಿದೆ.
ಶಿಲ್ಪಾ ಪರಮೇಶ್ವರ ನಾಯ್ಕ (17) ಮೃತ ಯುವತಿ ಎಂದು ಗುರುತಿಸಲಾಗಿದೆ. ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಪಕ್ಕದಲ್ಲಿರುವ ಬಾತ್ರೂಮ್ನಲ್ಲರುವ ಕಬ್ಬಿಣದ ಉಕ್ಕಿಗೆ ಚೂಡಿದಾರದ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಯುವತಿಯ ಅಣ್ಣ ಮಹೇಶ ಪರಮೇಶ್ವರ ನಾಯ್ಕ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರನ್ನು ದಾಖಲಿಸಿಕೊಂಡ ಪಿ.ಎಸ್.ಐ.ಹೆಚ್ ಓಂಕಾರಪ್ಪ ತನಿಖೆ ಕೈಗೊಂಡಿದ್ದಾರೆ.