ಅಸುರಕ್ಷಿತ ಮೀನುಗಾರಿಕೆ ತಡೆಗೆ ಜಿಲ್ಲಾಧಿಕಾರಿ ಪತ್ರ

Source: so news | Published on 16th September 2019, 8:47 PM | Coastal News | Don't Miss |

ಕಾರವಾರ:ಜೀವರಕ್ಷಕ ಸಾಧನಗಳಿಲ್ಲದ ಅಸುರಕ್ಷಿತ ಮೀನುಗಾರಿಕೆಯನ್ನು ತಡೆಗಟ್ಟುವಂತೆ ಮೀನುಗಾರಿಕಾ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಪತ್ರಬರೆದು ಸೂಚಿಸಿದ್ದಾರೆ.
ಮೀನುಗಾರಿಕೆಗಾಗಿ ಬೋಟುಗಳು ಸಮುದ್ರಕ್ಕೆ ಇಳಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಸೂಕ್ತ ಜೀವರಕ್ಷಕ ಸಾಧನಗಳನ್ನು ಹೊಂದುವುದು ಕಡ್ಡಾಯಗೊಳಿಸಲಾಗಿದೆ. ಈ ಹಿಂದೆ ಘಟಿಸಿದ ಕೂರ್ಮಗಡ ಘಟನೆ ಮರುಕಳಿಸದಂತೆ ಎಚ್ಚರವಹಿಸುವುದು ಅಗತ್ಯವಿದ್ದು, ಅಸುರಕ್ಷಿತ ಮೀನುಗಾರಿಕೆಯನ್ನು ತಡೆಗಟ್ಟುವಂತೆ ಅವರು ಪತ್ರದಲ್ಲಿ ಸೂಚಿಸಿದ್ದಾರೆ.
ಅಧಿಕೃತ ಪರವಾನಿಗೆ ಇಲ್ಲದ ಹಾಗೂ ಜೀವರಕ್ಷಕ ಸಾಧನಗಳಿಲ್ಲದ ಬೋಟುಗಳನ್ನು ವಶಕ್ಕೆ ಪಡೆಯಲು ಈಗಾಗಲೆ ತಿಳಿಸಲಾಗಿದೆ. ಮೀನುಗಾರಿಕೆಗೆ ತೆರಳುವಾಗ ಅಧಿಕೃತ ಪರವಾನಿಗೆ ಹಾಗೂ ಜೀವರಕ್ಷಕ ಸಾಧನಗಳೊಂದಿಗೆ ತೆರಳುವಂತೆ ಸೂಚಿಸಲಾಗಿದೆ. ಆದಾಗ್ಯೂ ಅನಾಹುತಗಳು ನಡೆದ ಸಂದರ್ಭದಲ್ಲಿ ಇಲಾಖೆ ಮುಖ್ಯಸ್ಥರನ್ನೇ ನೇರ ಹೊಣೆ ಮಾಡಲಾಗುವುದು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...