ಹಾಸನ : ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಸಂಪೂರ್ಣ ನಿಯಂತ್ರಣಕ್ಕೆ ಹಾಲಿ ಇರುವ ತನಿಖಾ ಠಾಣೆಗಳನ್ನು ಸುಸ್ಥಿತಿಯಲ್ಲಿಟ್ಟು ಅಗತ್ಯ ಸಿಬ್ಬಂದಿಗಳನ್ನು ನಿಯೋಜನೆ ಮಾಡುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ಜಿಲ್ಲಾ ಸಮಿತಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಮತ್ತು ನಿಯಂತ್ರಣ ಪ್ರಾಧಿಕಾರದ ಪ್ರದೇಶಗಳಿಗೆ ಪರವಾನಗಿ ನೀಡುವ ಕುರಿತು ಚರ್ಚೆ ನಡೆಸಿ ಸಭೆಯಲ್ಲಿ ಅಕ್ರಮ ಮರಳು ಸಾಗಾಣಿಕ ನಿಯಂತ್ರಣ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸಿದರು.
ಇದೇ ವೇಳೆ ಸಭೆಯಲ್ಲಿ ರಾಜಧನ 60 ರೂ ಗಳಿಂದ 80ರೂಗಳಿಗೆ ನಿಗಧಿ ಪಡಿಸುವುದರ ಕುರಿತು ಚರ್ಚೆ ನಡೆಸಲಾಯಿತು. ಗಣಿ ಗುತ್ತಿಗೆ ಪ್ರದೇಶಗಳ ಸ್ಟಾಕ್ಯಾರ್ಡ್ ಗಳಲ್ಲಿ ಜಿಯೋ ಫೆನ್ಸಿಂಗ್ ಮತ್ತು ಮರಳು ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಅಳವಡಿಸಿ ಹಾಗೂ ಮಾನಿಟರಿಂಗ್ ಮಾಡಲು ಜಿಪಿಎಸ್ ಕಾರ್ಯ ದೇಶದಾರರಿಗೆ ಅವಧಿ ವಿಸ್ತರಿಸುವಂತೆ ಹಾಗೂ ಸಾಗಾಣಿಕ ವಾಹನಗಳ ಮಾನಿಟರಿಂಗ್ ಮಾಡಿ ಜಿಪಿಎಸ್ ದುರ್ಬಳಕೆ ಮಾಡಿರುವ ವಾಹನಗಳಿಗೆ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹೇಳಿದರು.
ಸಭೆಯಲ್ಲಿ ಸಮಿತಿಯ ಮುಂದೆ ಸಲ್ಲಿಕೆಯಾಗಿರುವ ಹೊಸ ಕಲ್ಲು ಗಣಿಗಾರಿಕೆ ಅರ್ಜಿಗಳ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಭೆಯಲ್ಲಿ ಡಿವೈಎಸ್ಪಿ ಪುಟ್ಟಸ್ವಾಮಿಗೌಡ, ಹಿರಿಯ ಭೂವಿಜ್ಞಾನಿ ಹಾಗೂ ಸದಸ್ಯ ಕಾರ್ಯದರ್ಶಿ ನಾಗರಾಜ್, ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿ…ಆಶೋಕ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹರೀಶ್, ಇನ್ನಿತರ ಅಧಿಕಾರಿಗಳು ಹಾಜರಿದ್ದರು.