ಮಾವು ಬೆಳೆಗೂ ಪರಿಹಾರ ಘೋಷಿಸಿ-ಮಾವು ಬೆಳೆಗಾರ ಸಂಘ ಅಧ್ಯಕ್ಷ ನೀಲಟೂರು ಚಿನ್ನಪರೆಡ್ಡಿ ಒತ್ತಾಯ

Source: sonews | By Staff Correspondent | Published on 17th May 2020, 3:20 PM | State News |

ಶ್ರೀನಿವಾಸಪುರ : ಕೋಲಾರ ಜಿಲ್ಲೆಯಲ್ಲಿ ಸುಮಾರು 48 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಶ್ರೀನಿವಾಸಪುರ ತಾಲೂಕಿನಲ್ಲೇ ಒಟ್ಟು 30 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗಿದೆ. ಸರಕಾರ ದ್ರಾಕ್ಷಿ , ಕಲ್ಲಂಗಡಿ , ಕರಬೂಜ ಸೇರಿದಂತೆ 9 ರೀತಿಯ ಹಣ್ಣುಗಳಿಗೆ ಸರಕಾರ ಪರಿಹಾರ ಘೋಷಣೆ ಮಾಡಿರುವಂತೆ ಮಾವಿನ ಕೃಷಿಯನ್ನೇ ನಂಬಿ ಜೀವನ ಕಟ್ಟಿಕೊಂಡಿರುವ ಮಾವಿಗೂ ಪರಿಹಾರ ಘೋಷಿಸಬೇಕೆಂದು ಜಿಲ್ಲಾ ಮಾವು ಬೆಳೆಗಾರ ಸಂಘ ಅಧ್ಯಕ್ಷ ನೀಲಟೂರು ಚಿನ್ನಪರೆಡ್ಡಿ ಒತ್ತಾಯಿಸಿದ್ದಾರೆ.

ಏಷ್ಯಾ ಖಂಡದಲ್ಲೇ ಮಾವಿಗೆ ಖ್ಯಾತಿ ಪಡೆದಿರುವ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರೈತರು ದೇಶ ವಿದೇಶಗಳಿಗೆ ಮಾವು ರವಾನಿಸುತ್ತಿದ್ದಾರೆ. ಮಾವು ಬೆಳೆಗಾರರ ಪರಿಶ್ರಮವನ್ನು ಸರಕಾರ ಗಳು ಅರಿಯಬೇಕು. ನಾನಾ 9 ಹಣ್ಣುಗಳಿಗೆ ಸರಕಾರ ಪರಿಹಾರ ಕೊಡುತ್ತಿರುವುದು ಸರಿ . ತಾಲೂಕಿನಲ್ಲಿ ಜೀವನಾಡಿಯಾಗಿ ಬೆಳೆ ಯುತ್ತಿರುವ ಮಾವಿನ ಕೃಷಿಗೆ ಈ ಕಷ್ಟ ಕಾಲದಲ್ಲಿ ಎಕರೆಗೆ 20 ಸಾವಿರ ರೂ . ಪರಿಹಾರ ಕೊಡಬೇಕೆಂದು ಆಗ್ರಹಿಸಿದ್ದಾರೆ.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...