ಕಾರವಾರ: ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷರ ಜಿಲ್ಲಾ ಪ್ರವಾಸ

Source: sonews | By Staff Correspondent | Published on 26th November 2020, 1:08 AM | Coastal News |

ಕಾರವಾರ: ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ನವೆಂಬರ 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಅಂದು ಬೆಳಗ್ಗೆ 10:30ಕ್ಕೆ ಕಾರವಾರ ಡಿಸಿಎಫ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವರು. ನಂತರ 11:15ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ, ಸಿಇಒ, ಅರಣ್ಯಾಧಿಕಾರಿ, ತೋಟಗಾರಿಕೆ, ಕೃಷಿ, ಭೂವಿಜ್ಞಾನ, ಸಣ್ಣ ನೀರಾವರಿ ಅಧಿಕಾರಿಗಳೊಂದಿಗೆ ಅರಣ್ಯ ಪರಿಸರ, ಜಲಸಂವರ್ಧನೆ, ಜೀವವೈವಿಧ್ಯ, ಸಿಆರ್‍ಝಡ್ ಕುರಿತು ಸಮಾಲೋಚನೆ ನಡೆಸಲಿದ್ದು, ಬಳಿಕ ಮಧ್ಯಾಹ್ನ 2:30ಕ್ಕೆ ಕಾರವಾರ-ಅಂಕೋಲಾ ಮಧ್ಯೆ ವನೀಕರಣ ಯೋಜನೆಯ ಸ್ಥಳ ವೀಕ್ಷಣೆ ಮಾಡುವರು.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...