ಕಾರವಾರ: ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷರ ಜಿಲ್ಲಾ ಪ್ರವಾಸ
ಕಾರವಾರ: ರಾಜ್ಯ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಅವರು ನವೆಂಬರ 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ 10:30ಕ್ಕೆ ಕಾರವಾರ ಡಿಸಿಎಫ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವರು. ನಂತರ 11:15ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ, ಸಿಇಒ, ಅರಣ್ಯಾಧಿಕಾರಿ, ತೋಟಗಾರಿಕೆ, ಕೃಷಿ, ಭೂವಿಜ್ಞಾನ, ಸಣ್ಣ ನೀರಾವರಿ ಅಧಿಕಾರಿಗಳೊಂದಿಗೆ ಅರಣ್ಯ ಪರಿಸರ, ಜಲಸಂವರ್ಧನೆ, ಜೀವವೈವಿಧ್ಯ, ಸಿಆರ್ಝಡ್ ಕುರಿತು ಸಮಾಲೋಚನೆ ನಡೆಸಲಿದ್ದು, ಬಳಿಕ ಮಧ್ಯಾಹ್ನ 2:30ಕ್ಕೆ ಕಾರವಾರ-ಅಂಕೋಲಾ ಮಧ್ಯೆ ವನೀಕರಣ ಯೋಜನೆಯ ಸ್ಥಳ ವೀಕ್ಷಣೆ ಮಾಡುವರು.