ನವದೆಹಲಿ:ಅಕ್ರಮವಾಗಿ ಕೆರಿಬಿಯನ್ ದ್ವೀಪ ರಾಷ್ಟ್ರಕ್ಕೆ ಪ್ರವೇಶಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಜ್ರ ಉದ್ಯಮಿ ಮೆಹುಲ್ ಚೋಕ್ಸಿಗೆ ಡೊಮಿನಿಕಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.
ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಡೊಮಿನಿಕಾ ಹೈಕೋರ್ಟ್ ನೀಡಿದ್ದ ಸೂಚನೆ ಮೇರೆಗೆ ಚೋಕ್ಸಿ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಡೊಮಿನಿಕಾ ಚೀನಾ ಫ್ರೆಂಡ್ಶಿಪ್ ಆಸ್ಪತ್ರೆಯಿಂದ ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಚೋಕ್ಸಿ ನ್ಯಾಯಾಧೀಶರ ಮುಂದೆ ಹಾಜರಾದರು. ಅವರ ವಕೀಲರು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಪೊಲೀಸ್ ಕಸ್ಟಡಿಯಲ್ಲಿ ಚೌಕ್ಸಿ ಅವರಿಗೆ ಸುರಕ್ಷಿತ ಭಾವನೆ ಇಲ್ಲ. ಹಾಗಾಗಿ ಅವರನ್ನು ಆಂಟಿಗುವಾ ಮತ್ತು ಬಾರ್ಬುಡಾಗೆ ವಾಪಸ್ ಕಳುಹಿಸುವಂತೆ ಚೋಕ್ಸಿ ಪರ ವಕೀಲರು ಕೋರಿದ್ದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಚೋಕ್ಸಿ ವಿರುದ್ಧ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಅವರಿಗೆ ಜಾಮೀನು ನೀಡಿದರೆ ಅವರು ದೇಶದಿಂದ ಪರಾರಿಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಸರ್ಕಾರಿ ವಕೀಲರು ವಾದಿಸಿದರು.
ಚೋಕ್ಸಿ ಪರ ವಕೀಲರು ಇದನ್ನು ಅಲ್ಲಗಳೆದರು. ಜಾಮೀನಿಗೆ ಅಗತ್ಯವಿರುವಷ್ಟು ಠೇವಣಿ ಮೊತ್ತ ಹಾಗೂ ಡೊಮಿನಿಕಾಗೆ ಅಕ್ರಮ ಪ್ರವೇಶ ಮಾಡಿದ್ದಕ್ಕೆ ಎರಡರಷ್ಟು ದಂಡ ಕಟ್ಟಲು ಸಿದ್ಧ ಇರುವುದಾಗಿ ತಿಳಿಸಿದರು. ಮೇಲಾಗಿ ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಚೋಕ್ಸಿ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣಗಳಿಲ್ಲ. ನಡೆಯುತ್ತಿರುವುದು ಸಿವಿಲ್ ಪ್ರಕರಣವಷ್ಟೆ ಎಂದು ವಾದಿಸಿದರು.
ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿ ಜಾಮೀನು ನಿರಾಕರಿಸುತ್ತಿರುವುದಾಗಿ ತಿಳಿಸಿ, ವಿಚಾರಣೆಯನ್ನು ಜೂನ್ 14ಕ್ಕೆ ಮುಂದೂಡಿದರು.
ಸಿಬಿಐ ಡಿಐಜಿ ನೇತೃತ್ವದ ಅಧಿಕಾರಿಗಳ ತಂಡವು ಡೊಮಿನಿಕಾಗೆ ಹೋಗಿ ಚೋಕ್ಸಿಯನ್ನು ಭಾರತಕ್ಕೆ ಕರೆತರುವ ಪ್ರಯತ್ನ ನಡೆಸಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ (ಪಿಎನ್ಬಿ) ಸುಮಾರು ₹13,500 ಕೋಟಿ ವಂಚಿಸಿದ ಆರೋಪ ಚೋಕ್ಸಿ ಮೇಲಿದೆ
Read These Next
ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ
ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ...
ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...
ಇವಿಎಂ - ವಿವಿಪ್ಯಾಟ್ ಮತ ಪರಿಶೀಲನೆ ತೀರ್ಪು ಕಾದಿರಿಸಿದ ಸುಪ್ರೀಂಕೋರ್ಟ್
ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ದ ಮೂಲಕ ಚಲಾಯಿತವಾದ ಮತಗಳನ್ನು ವಿವಿಪ್ಯಾಟ್ ಯಂತ್ರದಲ್ಲಿ ದಾಖಲಾದ ಸ್ಲಿಪ್;ಗಳ ಜೊತೆ ತಾಳೆ ಹಾಕುವ ...
ಅಣಕು ಮತದಾನದ ವೇಳೆ ಬಿಜೆಪಿಗೆ ಮತ
ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...
ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್
ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...
ಇಂದು ಮೊದಲ ಹಂತದ ಚುನಾವಣೆ; ದೇಶಾದ್ಯಂತ 102 ಕ್ಷೇತ್ರಗಳಿಗೆ ಮತದಾನ
ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತ ಸಜ್ಜಾಗಿದ್ದು ಮೊದಲ ಹಂತದ ಲೋಕಸಭಾ ಚುನಾವಣೆ ಶುಕ್ರವಾರ ನಡೆಯಲಿದೆ. 21 ರಾಜ್ಯಗಳು, ಕೇಂದ್ರಾಡಳಿತ ...