ಧಾರವಾಡ: ಕೋವಿಡ್ ತಪಾಣೆಗಾಗಿ ಜಿಲ್ಲೆಗೆ ಒಟ್ಟು 2,300 ಆ್ಯಂಟಿಜೆನ್ ಕಿಟ್ ಪೂರೈಕೆಯಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಮುಂಬಾಗದಲ್ಲಿ ಇಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ ಆ್ಯಂಟಿಜನ್ ಪರೀಕ್ಷೆ ವಾಹನಕ್ಕೆ ಚಾಲನೆ ನೀಡಿದರು.
ಆ್ಯಂಟಿಜೆನ್ ಕಿಟ್ ಹೊಂದಿರುವ ವಾಹನ ಆಸ್ಪತ್ರೆ ಬಳಿ ಇದ್ದು, ಅಲ್ಲಿಗೆ ಆಗಮಿಸುವ ಕೋವಿಡ್-19 ಲಕ್ಷಣ ಹೊಂದಿರುವ ಜನರಿಂದ ಸ್ಥಳದಲ್ಲಿಯೇ ರಕ್ತ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅರ್ಧ ಗಂಟೆಯಲ್ಲಿ ಫಲಿತಾಂಶ ತಿಳಿಯಲಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಶವಂತ ಮದೀನಕರ, ಡಾ.ಸುಜಾತಾ ಹಸವಿಮಠ ಸೇರಿದಂತೆ ಇತರರು ಇದ್ದರು.