ಸೆ. 6ರಂದು ಸಂಚಾರಿ ಶಿಥಲೀಕರಣ ವಾಹನಗಳಿಗೆ ಚಾಲನೆ
ಮಂಗಳೂರು : ಕೇಂದ್ರ ಸರ್ಕಾರದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಎರಡು ಟನ್ ಸಾಮರ್ಥ್ಯದ 4 ಹಾಗೂ ನಾಲ್ಕು ಟನ್ ಸಾಮರ್ಥ್ಯ ದ 3 ಹಾಗೂ ಒಂದು ಟನ್ ಸಾಮರ್ಥ್ಯದ 1 ಸೇರಿದಂತೆ ಒಟ್ಟು 8 ಸಂಚಾರಿ ಶಿಥಲೀಕರಣ ವಾಹನಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ನಗರದ ಹೊಯ್ಗೆ ಬಜಾರಿನಲ್ಲಿರುವ ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಕೇಂದ್ರ ಕಚೇರಿ ಆವರಣದಲ್ಲಿ ಸೆ.6ರ ಸೋಮವಾರ ಬೆಳಿಗ್ಗೆ 9.30ಕ್ಕೆ ಹಮ್ಮಿಕೊಳ್ಳಲಾಗಿದೆ.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಇತರೆ ಗಣ್ಯರು ಭಾಗವಹಿಸುವರು ಎಂದು ಕರ್ನಾಟಕ ಮೀನುಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.