ಶ್ರೀನಿವಾಸಪುರದಲ್ಲಿ ಮುಂಜಾಗ್ರತಾ ಕ್ರಮವಾಗಿ ಪುರಸಭೆ ಸಿಬ್ಬಂದಿ  ಸಾರ್ವಜನಿಕ ಸ್ಥಳಗಳಲ್ಲಿ ಔಷಧ ಸಿಂಪಡಣೆ 

Source: sonews | By Staff Correspondent | Published on 24th March 2020, 6:49 PM | State News |

ಶ್ರೀನಿವಾಸಪುರ: ಪಟ್ಟಣದಲ್ಲಿ ಕರೊನಾ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪುರಸಭೆ ಸಿಬ್ಬಂದಿ  ಸಾರ್ವಜನಿಕ ಸ್ಥಳಗಳಲ್ಲಿ ಔಷಧ ಸಿಂಪಡಣೆ ಮಾಡಿದರು.

ಪುರಸಭೆ ವತಿಯಿಂದ ಪಟ್ಟಣದಲ್ಲಿ ಸ್ವಚ್ಛತೆ ಪಾಲನೆಗೆ ಮೊದಲ ಆದ್ಯತೆ ನೀಡಲಾಗಿದೆ. ಕೊರೊನಾ ವೈರಸ್‌ ತಡೆಗೆ ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಈಗ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲೂ ಔಷಧ ಸಿಂಪಡಣೆ ಮಾಡಲಾಗುವುದು. ಈಗಾಗಲೇ ಸಿಂಪಡಣಾ ಕಾರ್ಯ ಪ್ರಾರಂಭಿಸಲಾಗಿದೆ. ಸಿಂಪಡಣೆಗೆ ಅಗತ್ಯವಾದ ವಾಹನ ಹಾಗೂ ಸಲಕರಣೆಗಳನ್ನು ಸಿದ್ಧ ಸ್ಥಿತಿಯಲ್ಲಿ ಇಡಲಾಗಿದೆ ಎಂದು ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್‌ ವರದಿಗಾರ‘ಗೆ ತಿಳಿಸಿದರು.

ಪಟ್ಟಣದ ನಾಗರಿಕರು ಹಾಗೂ ಪಟ್ಟಣಕ್ಕೆ ಬಂದು ಹೋಗುವ ಜನರು ಕೊರೊನಾ ನಿಯಂತ್ರಣಕ್ಕೆ ವಿಧಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗುಂಪಾಗಿ ಓಡಾಡುವುದನ್ನು ನಿಲ್ಲಿಸಬೇಕು. ಆರೋಗ್ಯ ಇಲಾಖೆ ಮಾಡಿರುವ ಸಲಹೆ ಹಾಗೂ ಸೂಚನೆಗಳನ್ನು ತಪ್ಪದೆ ಅನುಸರಿಸಬೇಕು ಎಂದು ಸಲಹೆ ಮಾಡಿದರು.

ಸಂಕಷ್ಟದ ಸಂದರ್ಭದಲ್ಲಿ ಪಟ್ಟಣದ ನಾಗರಿಕರು ಪುರಸಭೆ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ಯಾವುದೇ ಕಾರಣಕ್ಕೂ ಪರಿಸರ ಮಾಲಿನ್ಯಕ್ಕೆ ಎಡೆಗೊಡಬಾರದು. ಸಿಬ್ಬಂದಿ ರೋಗ ನಿರೋಧಕ ಔಷಧ ಸಿಂಪರಣೆ ಮಾಡಲು ಬಂದಾಗ, ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.

ಪಟ್ಟಣದಲ್ಲಿ ಈಗಾಗಲೇ ಹೋಟೆಲ್‌, ಚಹಾ ಅಂಗಡಿ, ಚಿತ್ರ ಮಂದಿರ ಮುಚ್ಚಲಾಗಿದೆ. ಕತ್ತರಿಸಿದ ಹಣ್ಣು ಮಾರಾಟ ನಿಷೇಧಿಸಲಾಗಿದೆ. ಮಾಂಸದ ಅಂಗಡಿಗಳು ಬಂದಾಗಿವೆ. ಪಟ್ಟಣಕ್ಕೆ ಗ್ರಾಮೀಣ ಪ್ರದೇಶದಿಂದ ಬರುವ ಜನರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಹೇಳಿದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...