ದುಬೈ:ಭಾರತೀಯ ದೂತಾವಾಸ ಕಟ್ಟಡದಲ್ಲಿ ಅನಾವರಣಗೊಂಡ ಮಹಾತ್ಮ ಗಾಂಧಿ ಪ್ರತಿಮೆ 

Source: so english | By Arshad Koppa | Published on 6th November 2016, 2:14 PM | Gulf News | Special Report | Don't Miss |

ದುಬೈ, ನ ೫: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಹಾಗೂ ಭಾರತೀಯ ದೂತಾವಾಸದ ಸಹಯೋಗದಲ್ಲಿ ಭಾರತೀಯ ದೂತಾವಾಸ ಕಟ್ಟಡದಲ್ಲಿ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು.

ಭಾರತದ ರಾಯಭಾರಿ ಶ್ರೀ ಎಚ್ ಇ ಅನುರಾಗ್ ಭೂಷಣ್ ರೊಂದಿಗೆ ಹಲವಾರು ಗಣ್ಯರು ಮತ್ತು ಗಾಂಧಿ ಅನುಯಾಯಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ  ರಾಯಭಾರಿಗಳೊಂದಿಗೆ  NMC ಆಸ್ಪತ್ರೆಗಳ ಮುಖ್ಯಸ್ಥ ಡಾ ಬಿಆರ್ ಶೆಟ್ಟಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರಿನ ಕಾರ್ಯದರ್ಶಿ ಶ್ರೀ ಶಿವರಾಜ್,  ಇತಿಹಾಸಕಾರ ಮತ್ತು ಗಾಂಧಿವಾದಿ ವೇಮಗಲ್ ಸೋಮಶೇಖರ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಸಾಂಪ್ರದಾಯಿಕ ದೀಪ ಬೆಳಗಿಸುವಿಕೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಯಭಾರಿಗಳು ಇಂದಿನ ದಿನಗಳಲ್ಲಿ ಗಾಂಧೀಜಿಯವರ ತತ್ವಗಳು ಹಿಂದೆಂದಿಗಿಂತಲೂ ಹೆಚ್ಚು ಅಗತ್ಯವಿದೆ. ಇಂದಿನ ದಿನಗಳಲ್ಲಿ ಮಾನವೀಯತೆ ಮತ್ತು ಭ್ರಾತೃತ್ವದ ಅಸಹನೆ ಹೆಚ್ಚು ಕಂಡುಬರುತ್ತಿದೆ. ವಿಶ್ವದಲ್ಲಿ ತ್ಯಾಗ ಮತ್ತು ಶಾಂತಿಯ ಮೂಲಕ ಕ್ರೌರ್ಯವನ್ನು ಮೆಟ್ಟಿನಿಂತ ರಾಷ್ಟ್ರ ಭಾರತವೊಂದೇ ಆಗಿದೆ. ಸರ್ದಾರ್ ಪಟೇಲ್ ಮತ್ತು ಗಾಂಧೀಜಿಯವರು ಭಾರತೀಯರಲ್ಲಿ ಒಗ್ಗಟ್ಟು ಹಾಗೂ ಸೌಹಾರ್ದತೆಯನ್ನು ಮೂಡಿಸಲು ಪ್ರೇರಣೆ ನೀಡಿದ್ದಾರೆ. ಗಾಂಧೀಜಿಯವರ ಜೀವನ ಪ್ರತಿ ಮನುಷ್ಯನಿಗೂ ಒಂದು ಮಾದರಿಯಾಗಿದ್ದು ಇಡಿಯ ವಿಶ್ವದ ಜನರು ಅನುಸರಿಸಬೇಕಾಗಿದೆ. ಇಂತಹ ಧೀಮಂತ ವ್ಯಕ್ತಿತ್ವವನ್ನು ಬಿಂಬಿಸುವ ಪ್ರತಿಮೆಯನ್ನು ವಿದೇಶದ ನೆಲದಲ್ಲಿ ಸ್ಥಾಪಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಅವರು ದುಬೈಯಲ್ಲಿರುವ ಭಾರತೀಯ ದೂತಾವಾಸದಲ್ಲಿ ಒಂದು ಗಾಂಧಿ ಕೇಂದ್ರವನ್ನು ಸ್ಥಾಪಿಸಲಾಗುವುದು ಇದರಿಂದ ದೂತಾವಾಸಕ್ಕೆ ಭೇಟಿ ನೀಡುವ ಸಂದರ್ಶಕರಿಗೆ ಗಾಂಧಿಯವರ ಮತ್ತು ಅವರ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಸಾಧ್ಯವಾಗುವುದು ಎಂದು ತಿಳಿಸಿದರು. 


ಬಳಿಕ ಮಾತನಾಡಿ ಪದ್ಮಶ್ರೀ ಡಾ ಬಿಆರ್ ಶೆಟ್ಟಿ ಯವರು  ದುಬೈ ದೂತಾವಾಸದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಯ ಅನಾವರಣದ ಬಗ್ಗೆ ತನ್ನ ಸಂತೋಷವನ್ನು ವ್ಯಕ್ತಪಡಿಸಿದರು. ನಮ್ಮ ಪ್ರಧಾನಿಯವರಾದ ಶ್ರೀ ಮೋದಿಯವರು ಜಾಗತಿಕ ದೇಶಗಳಿಗೆ ಭೇಟಿ ಕೊಡುತ್ತಿದ್ದ ಸಮಯದಲ್ಲಿ ಜಗತ್ತಿಗೇ ಗಾಂಧಿಯವರ ಮೌಲ್ಯವನ್ನು ಪಸರಿಸುತ್ತಿದ್ದಾರೆ ಎಂದು ತಿಳಿಸಿದರು ಇದೇ ಸಂದರ್ಭದಲ್ಲಿ ಅವರು ಅಬುಧಾಬಿಯ ಭಾರತೀಯ ಶಾಲೆಯಲ್ಲಿ ಮತ್ತು ಇಂಡಿಯನ್ ಮತ್ತು ಸೋಶಿಯಲ್ ಸೆಂಟರ್ ಕೇಂದ್ರದಲ್ಲಿಯೂ ಗಾಂಧಿ ಪ್ರತಿಮೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.

ದೀಪಕ್ ಸೋಮಶೇಖರ ವಂದನಾರ್ಪಣೆ ಸಲ್ಲಿಸಿದರು. ವಂದೇ ಮಾತರಂ ಹಾಡುವ ಮೂಲಕ ಕಾರ್ಯಕ್ರಮ ಮುಕ್ತಾಯಗೊಂಡಿತು. 
 

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆಗೆ ಮುಂದುವರಿದ ಆಕ್ರೋಶ; 17 ದೇಶಗಳ ಖಂಡನೆ; ಗಲ್ಫ್ ಸಹಕಾರ ಮಂಡಳಿಯಿಂದಲೂ ಆಕ್ಷೇಪ

ತಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಒತ್ತಿ ಹೇಳುವ ಮೂಲಕ ವಿವಿಧ ದೇಶಗಳಲ್ಲಿ ಭುಗಿಲೆದ್ದಿರುವ ಕ್ರೋಧದ ಅಲೆಯನ್ನು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...