ಪರಿಸರ ಸ್ನೇಹಿ ಅರಿಶಿನ ಗಣೇಶ ಅಭಿಯಾನ
ಕಾರವಾರ : ಕೋವಿಡ್–19ನ ಹಿನ್ನೆಲೆಯಿಂದಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಂಣ ಮಂಡಳಿಯು ಈ ಬಾರಿಯ ಗಣೇಶ ಹಬ್ಬವನ್ನು ಪರಿಸರ ಸ್ನೇಹಿ ಅರಿಶಿನ ಗಣೇಶ ಅಭಿಯಾನವನ್ನು ಹಮ್ಮಿಕೊಂಡಿದೆ.
ಅರಿಶಿನ ಪುಟ್ಟ ಗಣಪತಿ ಪೂಜಿಸೋಣ ಕೋವಿಡ್ ನಿವಾರಕ ಪರಿಸರಸ್ನೇಹಿ ಹಬ್ಬ ಆಚರಿಸೋಣ ಧ್ಯೇಯ ವಾಕ್ಯದೊಂದಿಗೆ ಹತ್ತು ಲಕ್ಷ ಅರಿಶಿನ ಗಣೇಶನ್ನು ನಿರ್ಮಿಸುವ ಗುರಿಹೊಂದಿದ್ದು ವಿಶ್ವ ದಾಖಲೆ ನಿರ್ಮಿಸುವ ಪ್ರಯತ್ನಕ್ಕೆ ಸಾರ್ವಜನಿಕರು ಕೈ ಜೋಡಿಸಬೇಕು, ಸೆ. 10 ರಂದು ಸಂಜೆ 6 ಗಂಟೆಯ ಒಳಗೆ ಸಾರ್ವಜನಿಕರ ತಾವು ತಯಾರಿಸಿದ ಅರಿಶಿನ ಗಣೇಶನ ಛಾಯಾಚಿತ್ರವನ್ನು ಮಂಡಳಿಯ ವೆಬ್ಸೈಟ್ https://kspcb.karnataka.gov.in/ youtube@kspcbkarnataka, facebook@kspcbofficial, Twitter@karnatakakspcb, instagram: kspcb_official ವೆಬ್ಸೈಟ್ ಗೆ ಕಳಿಸಬೇಕು.
ಹಿಂದೂ ಧಾರ್ಮಿಕ ಆಚರಣೆಯಲ್ಲಿ ಬಳಸುವ ಕೆಲವು ಪದಾರ್ಥಗಳಾದ ಅರಿಸಿನ, ಗೋಮೂತ್ರ, ಸಗಣಿ, ಬೇವು, ತುಳುಸಿ ಮುಂತಾದವುಗಳು ರೋಗ ನಿರೋಧಕ ಶಕ್ತಿಯನ್ನು ಹೊಂದಿವೆ. ಕೋವಿಡ್ ಸಮಯದಲ್ಲಿ ರೋಗ ನಿರೋಧಕ ಶಕ್ತಿಯುಳ್ಳ ಅರಿಶಿನ ಮಿಶ್ರಿತವಾದ ಗೋಧಿ ಹಿಟ್ಟು , ರಾಗಿ ಹಿಟ್ಟಿನಿಂದ ಮಾಡಿದ ಪುಟ್ಟ ಗಣೇಶನ ವಿಗ್ರಹ ಪೂಜಿಸಿ ಮನೆಯಲ್ಲಿಯೇ ಗಣೇಶನ ಮೂರ್ತಿ ವಿಸರ್ಜಿಸುವ ಮೂಲಕ ಸಾಮಾಜಿಕ ಅಂತರ ಕಾಪಾಡಿಕೊಂಡು, ವಿಸರ್ಜಿತ ನೀರಿನಿಂದ ಮನೆಯನ್ನು ಶುಚಿ ಮಾಡಿಕೊಂಡರೆ ಕ್ರಿಮಿನಾಶಕವಾಗಿಯೂ ಬಳಕೆ ಆಗುವುದು. ಸಾರ್ವಜನಿಕರು ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕೆಂದು ಕಾರವಾರದ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.