ಮುರುಡೇಶ್ವರದ ಸಮಗ್ರ ಅಭಿವೃದ್ಧಿಗೆ ಪ್ರಯತ್ನ-ಸಚಿವ ಮಾಂಕಾಳ್ ವೈದ್ಯ

Source: SOnews | By Staff Correspondent | Published on 9th March 2024, 6:28 PM | Coastal News |

 

ಭಟ್ಕಳ: ಶಿವಶಕ್ತಿಯ ಕೇಂದ್ರವಾಗಿರುವ ಖ್ಯಾತ ಪ್ರವಾಸಿ ತಾಣ ಮುರುಡೇಶ್ವರದ ಸಮಗ್ರ ಅಭಿವೃದ್ಧಿಗಾಗಿ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಉ.ಕ.ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಮೀನುಗಾರಿ ಬಂದರು ಇಲಾಖೆಯ ಸಚಿವ ಮಾಂಕಾಳ್ ವೈದ್ಯ ಹೇಳಿದರು.

ಅವರು ಶುಕ್ರವಾರ ರಾತ್ರಿ ಮಹಾಶಿವರಾತ್ರಿ ಅಂಗವಾಗಿ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಜಿಲ್ಲಾಡಳಿತ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಮೂಲಕ ಮಹಾಶಿವರಾತ್ರಿ ಜಾಗರಣೆ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ದೇವರನ್ನು ನಂಬಿ ಕೆಲಸ ಮಾಡಬೇಕು, ದೇವರಲ್ಲಿ ವಿಶ್ವಾಸ ಇಡಬೇಕು. ಮುರುಡೇಶ್ವರದ ಊರಿನವರ ಸಹಕಾರದಿಂದ ಇದೇ ಮೊದಲ ಬಾರಿಗೆ ಶಿವರಾತ್ರಿ ಜಾಗರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಮಾತನಾಡಿ, ಮುರುಢೇಶ್ವರದಲ್ಲಿ ಹೆಚ್ಚಿನ ಪ್ರವಾಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಯೋಜನೆ ಇದ್ದು ಪ್ರವಾಸಿಗರನ್ನು ಆಕರ್ಷಿಸಲು ಪ್ರತಿ ವರ್ಷ ಶಿವರಾತ್ರಿ ಜಾಗರಣೆ ಕಾರ್ಯಕ್ರಮ ನಿರಂತರವಾಗಿ ಮುಂದುವರೆಸಲು ನಿರ್ಧರಿಸಲಾಗಿದೆ.  ಎಂದರು.

ಜಿ.ಪಂ. ಸಿಇಒ ಈಶ್ವರ ಕಾಂದೂ, ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೊನ್ನಾವರ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಭಟ್ಕಳ ಉಪ ವಿಭಾಗಾಧಿಕಾರಿ ಡಾ.ನಯನಾ, ಭಟ್ಕಳ ತಹಶೀಲ್ದಾರ್ ತಿಪ್ಪೇಸ್ವಾಮಿ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಜಯಂತ್, ಮಾವಳ್ಳಿ ಗ್ರಾ.ಪಂ. ಆಧ್ಯಕ್ಷೆ ನಾಗರತ್ನ ಕೊಗ್ಗ , ಮುರುಡೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಜಯರಾಮ ಅಡಿಗ, ಮುರ್ಡೇಶ್ವರದ ಗ್ರಾಮೀಣ ಪ್ರತಿಷ್ಠಾನದ ಅಧ್ಯಕ್ಷ ಎಸ್. ಎಸ್. ಕಾಮತ್ ಉಪಸ್ಥಿತರಿದ್ದರು.

 

 

 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...