ಕೋಟಿ ರೂ ಪಾವತಿಸಲು ಆಗದೆ ಕೋಮಾ ಸ್ಥಿತಿಯಲ್ಲಿದ್ದ ರೋಗಿಗೆ ಭಾರತಕ್ಕೆ ತರುವ ಅವಕಾಶ

Source: S O News service | By Staff Correspondent | Published on 8th February 2017, 12:46 AM | Coastal News | National News | Gulf News | Don't Miss |


                                                                 ಸಾಹಿಲ್ ಆನ್ ಲೈನ್ ವರದಿ ಫಲಶ್ರುತಿ
ಶುಕ್ರವಾರ ಕೋಮಾಸ್ಥಿತಿಯಲ್ಲಿಯೇ ಅಬೂಬಕ್ಕರ್ ಬೆಂಗಳೂರಿಗೆ

ಭಟ್ಕಳ: ಕಳೆದ ೯ ತಿಂಗಳ ಹಿಂದೆ ಸೌದಿ‌ಅರೇಬಿಯಾ ರಿಯಾದ್‌ನಲ್ಲಿ ವಾಹನ ಅಪಘಾತಕ್ಕೊಳಗಾಗಿ ಕೋಮಾಸ್ಥಿತಿಗೆ ತಲುಪಿ ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವೆಚ್ಚ ಭರಿಸಲಾಗದೇ ಆಸ್ಪತ್ರೆಯಲ್ಲಿಯೇ ಅನಿವಾರ್ಯವಾಗಿ ದಿನದೂಡುತ್ತಿದ್ದ ಭಟ್ಕಳ ಹನೀಫಾಬಾದ್ ನಿವಾಸಿ ಮಾಕಡೆ ಅಬೂಬಕ್ಕರ್ ಮನೆಯವರ ಸಂಕಟಕ್ಕೆ ಕೈ ಜೋಡಿಸಲು ಕೇಂದ್ರ ಸರಕಾರ ಹಿಂದೇಟು ಹಾಕಿರುವಂತೆಯೇ, ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೋರ್ವರು ರು.೧ಕೋ. ಚಿಕಿತ್ಸಾ ವೆಚ್ಚವನ್ನು ತಾವೇ ಭರಿಸಿ ಅಬೂಬಕ್ಕರ್‌ನ್ನು ಭಾರತಕ್ಕೆ ರವಾನಿಸಲು ಅವಕಾಶ ಮಾಡಿ ಕೊಟ್ಟಿದ್ದಾರೆ. 

ಶುಕ್ರವಾರ ಅಬೂಬಕ್ಕರ್‌ರನ್ನು ಬೆಂಗಳೂರಿಗೆ ಕರೆ ತರಲಾಗುತ್ತಿದ್ದು, ಅಲ್ಲಿನ ಮಣಿಪಾಲ ಆಸ್ಪತ್ರೆಯ ವೈದ್ಯರ ತಂಡ ಮುಂದಿನ ಚಿಕಿತ್ಸೆ ಕೈಗೊಳ್ಳಲಿದೆ. ಕಳೆದ ೯ ತಿಂಗಳಿನಿಂದ ಸೌದಿ‌ಅರೇಬಿಯಾ ಆಸ್ಪತ್ರೆಯಲ್ಲಿ ಕೋಮಾ ಸ್ಥಿತಿಯಲ್ಲಿರುವ ಭಟ್ಕಳದ ಅಬೂಬಕ್ಕರ್ ಹಾಗೂ ಆಸ್ಪತ್ರೆಯ ವೆಚ್ಚದ ಬಗ್ಗೆ ಸ್ಥಳೀಯರೋರ್ವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ರಿಗೆ ಟ್ವೀಟ್ ಸಂದೇಶ ರವಾನಿಸಿ ನೆರವಿಗೆ ಕೋರಿದ್ದರು. ಇದಕ್ಕೆ ತಕ್ಷಣ ಸ್ಪಂದಿಸಿದ್ದ ಸಚಿವರು ರಿಯಾದ್‌ನಲ್ಲಿರುವ ರಾಯಭಾರಿ ಕಚೇರಿಯ ಅಧಿಕಾರಿ ಟಿ.ಟಿ.ಜಾರ್ಜರನ್ನು ಸಂಪರ್ಕಿಸುವಂತೆ ತಿಳಿಸಿದ್ದರು. ಈ ನಡುವೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಎಂದು ಹೇಳಿಕೊಂಡ ವ್ಯಕ್ತಿಯೋರ್ವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವರಿಗೆ ಟ್ವೀಟ್ ಮಾಡಿ ಧರ್ಮದ ಆಧಾರದಲ್ಲಿ ವಿಶೇಷ ಕಾಳಜಿ ವಹಿಸಿ ಸಚಿವರು ಸಹಾಯ ನೀಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಸಚಿವೆ ಸುಷ್ಮಾ ಸ್ವರಾಜ್, ನಾವು ಧರ್ಮದ ಆಧಾರದಲ್ಲಿ ನೆರವು ನೀಡುತ್ತಿಲ್ಲ. ಭಾರತೀಯ ಎಂಬ ಕಾರಣಕ್ಕೆ ಸಹಾಯಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದ್ದರು. ಆದರೆ ನಂತರದ ಬೆಳವಣಿಗೆಯಲ್ಲಿ ಕೋಮಾದಲ್ಲಿರುವ ಅಬೂಬಕ್ಕರ್‌ರನ್ನು ಭಾರತಕ್ಕೆ ಕರೆ ತರಲು ವೀಸಾ ಇನ್ನಿತರ ಸಹಾಯವನ್ನು ಹೊರತು ಪಡಿಸಿ ಹಣಕಾಸಿನ ನೆರವು ನೀಡಲು ಸಾಧ್ಯವಿಲ್ಲ ಎಂದು ರಾಯಭಾರಿ ಕಚೇರಿಯ ಅಧಿಕಾರಿಗಳು ತಮ್ಮನ್ನು ಭೇಟಿಯಾದ ಭಟ್ಕಳಿಗರಿಗೆ ತಿಳಿಸಿದ್ದರು. ಇದರಿಂದ ವಿಚಲಿತಗೊಂಡ ಭಟ್ಕಳಿಗರು ಆಸ್ಪತ್ರೆಗೆ ಪದೇ ಪದೇ ಭೇಟಿ ನೀಡಿ ಅಸಹಾಯಕತೆಯಿಂದ ಹಿಂದಿರುಗುತ್ತಿದ್ದುದನ್ನು ಕಂಡ ಅದೇ ಆಸ್ಪತ್ರೆಯ ಸಿ‌ಇ‌ಓ ಓರ್ವರು, ಅಬೂಬಕ್ಕರ್ ಬಡತನದ ಬಗ್ಗೆ ಭಟ್ಕಳಿಗರೊಂದಿಗೆ ಚರ್ಚಿಸಿದ್ದಾರೆ. ಕೊನೆಗೆ ತಾವೇ ಆಸ್ಪತ್ರೆಯ ವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದು ‘ಉತ್ತರ ಪ್ರದೇಶದ ವ್ಯಕ್ತಿಯೋರ್ವರು ಇದೇ ಸ್ಥಿತಿಯಲ್ಲಿ ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ನಾವು ಅವರ ಚಿಕಿತ್ಸಾ ವೆಚ್ಚವನ್ನೂ ಭರಿಸುತ್ತೇವೆ. ಆದರೆ ನೀವು ಅವರನ್ನು ಭಾರತಕ್ಕೆ ಕರೆದುಕೊಂಡು ಹೋಗಲು ನೆರವಾಗಬೇಕು’ ಎಂಬ ಶರತ್ತನ್ನು ವಿಧಿಸಿದ್ದಾರೆ. ಇದಕ್ಕೆ ಭಟ್ಕಳಿಗರು ಒಪ್ಪಿಕೊಂಡಿದ್ದು, ಇಬ್ಬರನ್ನೂ ಭಾರತಕ್ಕೆ ಕರೆ ತರುವ ಪ್ರಯತ್ನ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಇಲ್ಲಿನ ಅಬೂಬಕ್ಕರ್ ಕುಟುಂಬದ ಸದಸ್ಯರು, ನಮಗೆ ಈಗ ಸಮಾಧಾನವಾಗಿದೆ. ನಮಗೆ ರು.೧ಕೋ. ರುಪಾಯಿ ಭರಿಸುವ ಶಕ್ತಿ ಇಲ್ಲ. ನಾವು ಅಬೂಬಕ್ಕರ್‌ರನ್ನು ಮತ್ತೆ ನೋಡುತ್ತೇವೆ ಎಂದುಕೊಂಡಿರಲಿಲ್ಲ ಎಂದು ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...