‘ಭಟ್ಕಳದಲ್ಲಿ ಸಂಭ್ರಮದಿಂದ ನಡೆದ ಬಕ್ರಿದ ಹಬ್ಬ’

Source: so news | Published on 13th August 2019, 12:05 AM | Coastal News | Don't Miss |

 

ಭಟ್ಕಳ: ತ್ಯಾಗ ಬಲಿದಾನಗಳ ಸಂಕೇತವಾಗಿರುವ ಈದುಲ್ ಅಝ್ಹಾ (ಬಕ್ರೀದ್ ಹಬ್ಬ)ವನ್ನು ಮುಸಲ್ಮಾನ ಬಂಧುಗಳು ಸಂಭ್ರಮ, ಸಡಗರದಿಂದ ಸೋಮವಾರದಂದು ಬೆಳಿಗ್ಗೆ ಆಚರಿಸಿದರು. 

ಸೋಮವಾರದಂದು ಬೆಳಿಗ್ಗೆ ಇಲ್ಲಿನ ಜಾಮಿಯಾ ಮಸೀದಿ (ಚಿನ್ನದ ಪಳ್ಳಿ)ಯಲ್ಲಿ ಈದ್ ನಮಾಝ್ ನಿರ್ವಹಿಸುವುದರ ಮೂಲಕ ಪರಸ್ಪರ ಶುಭವನ್ನು ಕೋರಿದರು. ಈದ್ ನಮಾಝ್ ನೇತೃತ್ವ ವಹಿಸಿದ್ದ ಮೌಲಾನ ಅಬ್ದುಲ್ ಅಲೀಮ್ ನದ್ವಿ ಸಮಸ್ತ ಬಾಂಧವರನ್ನು ಉದ್ದೇಶಿಸಿ ಈದ್ ಸಂದೇಶ ನೀಡಿದರು.
ಪ್ರವಾದಿ ಇಬ್ರಾಹೀಮ್ ಹಾಗೂ ಅವರ ಏಕೈಕ ಪುತ್ರ. ಇಸ್ಮಾಯಿಲ್‍ರ ತ್ಯಾಗ ಹಾಗೂ ಬಲಿದಾನವನ್ನು ಸ್ಮರಿಸುವ ಈದ್ ನಮ್ಮ ಜೀವನದಲ್ಲೂ ಕಷ್ಟಗಳನ್ನು ಸಹಿಸುವ, ತ್ಯಾಗ ಮನೋಭಾವನೆಗಳನ್ನು ಬೆಳೆಸಿಕೊಳ್ಳುವ ಶಕ್ತಿ ದಯಪಾಲಿಸಿ ಎಂದು ಸಂದೇಶ ಸಾರಿದರು.
ಇಲ್ಲಿನ ನೂರ್ ಮಸೀದಿ, ಖಲಿಫಾ ಜಾಮಿಯಾ ಮಸೀದಿ, ಸೈಯ್ಯದನಾ ಇಬ್ರಾಹೀಮ್ ಜಾಮಿಯಾಬಾದ್, ತೆಂಗಿನ ಗುಂಡಿ ಜಾಮಿಯಾ ಮಸೀದಿ, ಆಹ್ಮದ್ ಸಯೀದ್ ಜಾಮಿಯಾ ಮಸೀದಿ ಹುರುಳೀಸಾಲ, ಸಲಫಿ ಮಸೀದಿ ನವಾಯತ್ ಕಾಲೋನಿ ಹಾಗೂ ಮದೀನಾ ಕಾಲೋನಿ ಜಾಮಿಯ ಮಸೀದಿಗಳಲ್ಲಿ ಈದ್ ನಮಾಝ್ ನೆರವೇರಿತು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...