ಮೈಸೂರು:ಮೈಸೂರು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ವರುಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರಿಗೆ ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಕೃಷ್ಣ ಅವರು ಚುನಾವಣಾ ಪ್ರತಿಜ್ಞಾವಿಧಿ ಬೋಧಿಸಿ ಮತದಾನದ ಅರಿವು ಮೂಡಿಸಿದರು.
ಬುಧವಾರ ವರುಣಾ ಗ್ರಾಮದ ಶಾಲಾ ಮಕ್ಕಳು, ಅಂಗವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ರೀ ಶಕ್ತಿ ಸಂಘದ ಮಹಿಳೆಯರು ಜಾಥಾದಲ್ಲಿ ಭಾಗವಹಿಸಿ ಅಲ್ಲಿಯ ಜನತೆಗೆ ಕಡ್ಡಾಯ ಮತದಾನದ ಘೋಷವಾಕ್ಯಗಳನ್ನು ಕೂಗಿ ಮತ ಚಲಾಯಿಸುವಂತೆ ಅರಿವು ಮೂಡಿಸಲಾಯಿತು.
2019ರ ಏಪ್ರಿಲ್ 18 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳಾದ ಇವಿಎಂ ಮತ್ತು ವಿವಿಪ್ಯಾಟ್ಗಳ್ಳಿ ಹೇಗೆ ಮತದಾನ ಮಾಡುವುದು ಎಂಬುದರ ಪ್ರಾತ್ಯಕ್ಷಿಕೆ ನೀಡಿ, ಗ್ರಾಮಸ್ಥರಿಂದ ಅಣಕು ಮತದಾನ ಮಾಡಿಸುವ ಮೂಲಕ ಮತದಾರರಿಗೆ ಮತದಾನದ ಬಗ್ಗೆ ಜಾಗೃತಿ ನಡೆಸಲಾಯಿತು.
ಮತದಾರರು ಯಾವುದೇ ಆಮಿಷಗಳಿಗೆ ಒಳಗಾದೆ ನೈತಿಕ ಮತದಾನಕ್ಕೆ ಬೆಂಬಲ ನೀಡಿ ಪ್ರಜಾ ಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಸಾಗುವುದು ಅನಿವಾರ್ಯವಾಗಿದೆ. ಆಗಾಗಿ ಪ್ರತಿಯೊಬ್ಬ ಮತದಾರ ಜಾಗೃತರಾಗಿ ಚುನಾವಣೆಯ ದಿನ ತಮ್ಮ ಇತರೆ ಕೆಲಸಗಳಿಗೆ ವಿರಾಮ ಹಾಕಿ, ತಪ್ಪದೇ ಮತದಾನ ಮಾಡಬೇಕು ಎಂದು ಅವರು ಮನವಿ ಮಾಡಿದರು.
ಶಿಶು ಅಭಿವೃದ್ಧಿ ಅಧಿಕಾರಿ ಮಂಜುಳಾ ಪಾಟೀಲ್, ತಾಲ್ಲೂಕು ಸಂಯೋಜಕ ಕರೀಗೌಡ, ವರುಣಾ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.