ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಚುನಾವಣೆ?, ಕೇಂದ್ರದಿಂದ ರಾಜಕೀಯ ಪಕ್ಷಗಳೊಂದಿಗೆ ಶೀಘ್ರದಲ್ಲೇ ಸಮಾಲೋಚನೆ ನಿರೀಕ್ಷೆ

Source: VB | Published on 14th June 2021, 7:09 PM | National News |

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರಳಿ ಒದಗಿಸುವ ಬಗ್ಗೆ ಹಾಗೂ ಅಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರವು ಜಮ್ಮು-ಕಾಶ್ಮೀರದ ರಾಜಕೀಯ ಪಕ್ಷಗಳೊಂದಿಗೆ ಚರ್ಚೆ ಆರಂಭಿಸುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.

ಈ ಬಗ್ಗೆ ಇನ್ನೂ ಅಧಿಕೃತ ಆಹ್ವಾನ ದೊರಕದಿದ್ದರೂ, ಮಾತುಕತೆಯಲ್ಲಿ ಪಾಲ್ಗೊಳ್ಳುವ ಉತ್ಸಾಹವನ್ನು ಗುಪ್ಕರ್ ಒಕ್ಕೂಟ(ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ನೆರವಾಗಲು ರಚನೆಯಾದ 7 ಪಕ್ಷಗಳ ಒಕ್ಕೂಟ) ಮತ್ತು ನ್ಯಾಷನಲ್ ಕಾನ್ಫರೆನ್ಸ್ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. 2018ರಲ್ಲಿ ಮೆಹಬೂಬ ಮುಫ್ತಿಯೊಂದಿಗಿನ ಮೈತ್ರಿಯನ್ನು ಬಿಜೆಪಿ ಕಡಿದುಕೊಂಡಂದಿನಿಂದ ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದೆ. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಗೊಳಿಸಿದ್ದ ಕೇಂದ್ರ ಸರಕಾರ, ರಾಜ್ಯವನ್ನು 2 ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. 2019ರಲ್ಲಿ ಸಾರ್ವತ್ರಿಕ ಚುನಾವಣೆಯ ಜೊತೆಗೇ ಜಮ್ಮು-ಕಾಶ್ಮೀರದಲ್ಲೂ ಚುನಾವಣೆ ನಡೆಯಲಿದೆ ಎಂದು ಭಾವಿಸಲಾಗಿತ್ತು. ಆದರೆ ಭದ್ರತೆಗೆ ಬೆದರಿಕೆ ಇದೆ ಎಂಬ ಆಡಳಿತದ ವರದಿಯ ಹಿನ್ನೆಲೆಯಲ್ಲಿ ಚುನಾವಣೆ ನಡೆಸುವುದಿಲ್ಲ ಎಂದು ಚುನಾವಣಾ ಆಯೋಗ ಹೇಳಿತ್ತು.

ಕಾಶ್ಮೀರದಲ್ಲಿ ಚುನಾವಣಾ ಪ್ರಕ್ರಿಯೆ ಆರಂಭಿಸಲು ಅಮೆರಿಕವು ಭಾರತ ಸರಕಾರವನ್ನು

ಗುಪ್ಕರ್ ಮೈತ್ರಿಕೂಟದಲ್ಲಿ ಗರಿಗೆದರಿದ ಚಟುವಟಿಕೆ

ಇದೀಗ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರಳಿಸುವ ಮತ್ತು ಅಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ಆರಂಭಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ತಾವು ಮಾತುಕತೆಗೆ ಯಾವತ್ತೂ ವಿರೋಧಿಸಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ಮುಖಂಡ, ಗುಪ್ಕರ್ ಮೈತ್ರಿಕೂಟದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಈ ಮಧ್ಯೆ, ಸುಮಾರು 6 ತಿಂಗಳಿಂದ ನಿಷ್ಕ್ರಿಯವಾಗಿದ್ದ ಗುಪ್ಕರ್ ಮೈತ್ರಿಕೂಟದಲ್ಲಿ ಮತ್ತೆ ಬಿರುಸಿನ ಚಟುವಟಿಕೆ ಆರಂಭಗೊಂಡಿದೆ. ಬುಧವಾರ ಪಿಡಿಪಿ ಅಧ್ಯಕ್ಷೆ ಮೆಹಬೂಬ ಮುಫ್ತಿ ಮನೆಗೆ ಭೇಟಿನೀಡಿದ್ದ ಅಬ್ದುಲ್ಲಾ ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ರೋತ್ಸಾಹಿಸುತ್ತದೆ ಎಂದು ಅಮೆರಿಕದ ಅಧ್ಯಕ್ಷ ಬೈಡನ್ ಸರಕಾರದ ಹಿರಿಯ ಅಧಿಕಾರಿಯೊಬ್ಬರು ಇತ್ತೀಚೆಗೆ ಹೇಳಿದ್ದರು. ಕಾಶ್ಮೀರವು ಸಾಮಾನ್ಯ ಸ್ಥಿತಿಗೆ ಸಾಧ್ಯವಾದಷ್ಟು ಬೇಗ ಮರಳಬೇಕು ಎಂದು ನಾವು ಬಯಸುತ್ತೇವೆ. ಅಲ್ಲಿ ಈಗಾಗಲೇ 4ಜಿ ಇಂಟರ್‌ನೆಟ್ ಸೌಲಭ್ಯ ಮರುಸ್ಥಾಪನೆ, ನಾಯಕರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ್ದು ಮುಂತಾದ ಹಲವು ಉಪಕ್ರಮಗಳು ನಡೆದಿರುವುದನ್ನು ಗಮನಿಸಿದ್ದೇವೆ. ಇದಕ್ಕೆ ಪೂರಕವಾಗಿ ಚುನಾವಣಾ ಪ್ರಕ್ರಿಯೆ ನಡೆಸಲು ನಾವು ಭಾರತ ಸರಕಾರಕ್ಕೆ ಪ್ರೋತ್ಸಾಹ ನೀಡುತ್ತೇವೆ ಎಂದು ಅಮೆರಿಕದ ದಕ್ಷಿಣ ಮತ್ತು ಕೇಂದ್ರ ಏಶ್ಯಾವಿಭಾಗದ ಅಧಿಕಾರಿ ಡೀನ್ ಥಾಮ್ಸನ್ ಹೇಳಿದ್ದರು. ಈ ಹೇಳಿಕೆಯ ಬಳಿಕ ಕೇಂದ್ರ ಸರಕಾರ ಕಾಶ್ಮೀರದಲ್ಲಿ ಚುನಾವಣೆ ನಡೆಸುವ ಬಗ್ಗೆ ಚಿಂತಿಸುತ್ತಿದೆ ಎಂದು ಮೂಲಗಳು ಹೇಳಿವೆ. ಕಳೆದ ಡಿಸೆಂಬರ್‌ನಲ್ಲಿ ಜಮ್ಮು ಕಾಶ್ಮೀರದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಗುಪ್ಕರ್ ಮೈತ್ರಿಕೂಟ 100ಕ್ಕೂ ಅಧಿಕ ಸ್ಥಾನಗಳಲ್ಲಿ ಗೆದ್ದಿದ್ದರೂ 74 ಸ್ಥಾನ ಗೆದ್ದಿದ್ದ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
 

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಪತಂಜಲಿಯಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ; ಕಾನೂನು ಕ್ರಮ ಎದುರಿಸಲು ಸಿದ್ದರಾಗಿ ಪತಂಜಲಿಗೆ ಸುಪ್ರೀಂ ಕೋರ್ಟ್ ಚಾಟಿ

ವೈಜ್ಞಾನಿಕ ತಳಹದಿಯ ಔಷಧಿಗಳನ್ನು ಟೀಕಿಸುವ ಹಾಗೂ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ...