'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

Source: Vb | By I.G. Bhatkali | Published on 19th April 2024, 6:04 AM | State News | National News |

ಮಂಡ್ಯ: ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ವಸೂಲಿ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ನಗರದ ಮಂಡ್ಯ ವಿವಿ ಆವರಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪ್ರಜಾಧ್ವನಿ-2 ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು, ಈ.ಡಿ,ಐ.ಟಿ, ಸಿಬಿಐನಂತಹಸಂಸ್ಥೆಗಳನ್ನು ಬಿಟ್ಟು ಹೆದರಿಸಿ ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂ.ಗಳನ್ನು ಬಿಜೆಪಿ ವಸೂಲಿ ಮಾಡಿದೆ ಎಂದು ಆರೋಪಿಸಿದರು.

ನ್ಯಾಯಾಲಯದ ಆದೇಶದಂತೆ ಚುನಾವಣಾ ಬಾಂಡ್ ಹಗರಣ ಕುರಿ ತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು ಒಂದೂವರೆ ಗಂಟೆ ಸಮಜಾ ಯಿಷಿ ನೀಡುವ ವೇಳೆ ಅವರ ಕೈ ನಡುಗು ತ್ತಿತ್ತು. ಇದನ್ನು ಜನರು ಗೂಗಲ್‌ನಲ್ಲಿ ನೋಡಬಹುದು ಎಂದು ಹೇಳಿದರು.

ಕರ್ನಾಟಕದ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಇದೇ ಮಾದರಿಯಲ್ಲಿ ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಒಕ್ಕೂಟವೂ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆ ಯಲ್ಲಿ ಅಳವಡಿಸಿಕೊಂಡಿದೆ ಎಂದರು.

ಕೇಂದ್ರದಲ್ಲಿ ತಮ್ಮ ಸರಕಾರ ಅಸ್ತಿತ್ವಕ್ಕೆ ಬಂದರೆ, ತಿಂಗಳಿಗೆ 8,500 ರೂ.ನಂತೆ ವರ್ಷಕ್ಕೆ ಒಂದು ಲಕ್ಷ ರೂ.ಗಳನ್ನು ದೇಶದ ಬಡ ಕುಟುಂಬದ ಹಿರಿಯ ಮಹಿಳೆಯರ ಖಾತೆಗೆ ಜಮಾ ಮಾಡಲಿದೆ. ದಿನದ 16 ಗಂಟೆ ದುಡಿಯುವ ಮಹಿಳೆಯರಿಗೆ ಅನುಕೂಲ ಕಲ್ಪಿಸುವ ಇದು ಕ್ರಾಂತಿಕಾರಕ ಹೆಜ್ಜೆಯಾಗಲಿದೆ ಎಂದು ತಿಳಿಸಿದರು. ಅವರು ಮೋದಿ ಸರಕಾರ ಕೇವಲ 25 ಮಂದಿ ಶ್ರೀಮಂತರಿಗೆ ನಡೆಯುತ್ತಿರುವ ಸರಕಾರ. ಶ್ರೀಮಂತರ ಕೋಟ್ಯಂತರ ರೂ. ಸಾಲ ಮನ್ನಾ ಮಾಡಲಾಗುತ್ತದೆ. ಅನ್ನದಾತರ ಸಾಲಮನ್ನಾ ಮಾಡಲು ಸಾಧ್ಯವಾಗುವು ದಿಲ್ಲ ಏಕೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಿದೆ. ಬೆಳೆಗಳಿಗೆ ಸ್ವಾಮಿನಾಥನ್ ವರದಿ ಅನ್ವಯ ಕನಿಷ್ಠ ಬೆಂಬಲ ನಿಗದಿ ಮಾಡಲಿದ್ದು, ಬೆಳೆ ವಿಮಾ ಪರಿಹಾರವನ್ನು 30 ದಿನದಲ್ಲಿ ಪಾವತಿಸಲಿದೆ ಎಂದು ಭರವಸೆ ನೀಡಿದರು.

ಡಿಪ್ಲೊಮಾ, ಪದವಿ ಮುಗಿಸಿದ ಯುವ ಜನರಿಗೆ ಮಾಸಿಕ 8,500 ರೂ. ಸಹಾಯ ಧನ ನೀಡಿ ಕೌಶಲ ತರಬೇತಿ ಕೊಡಿಸಿ ಕೆಲಸ ದೊರಕಿಸಿಕೊಡಲಾಗುವುದು. ಗುತ್ತಿಗೆ ಪದತಿ ಸಂಪೂರ್ಣ ನಿಷೇಧಿಸಿ ಸರಕಾರಿ, ಅರೆ ಸರಕಾರಿ ಇಲಾಖೆಯ ಗುತ್ತಿಗೆ ನೌಕರರನ್ನು ಖಾಯಂಗೊಳಿಸಲಾಗು ವುದು. ಆಶಾ, ಅಂಗನವಾಡಿ ಕಾರ್ಯತೆ್ರ ಯರ ವೇತನ ಹೆಚ್ಚಿಸಲಾಗುವುದು.

ಉದ್ಯೋಗ ಖಾತರಿ ಕೂಲಿಯನ್ನು 400 ರೂ.ಗೆ ಹೆಚ್ಚಿಸಿ ಯೋಜನೆಯನ್ನು ನಗರಗಳಿಗೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು. ಸಚಿವಎನ್.ಚಲುವರಾಯಸ್ವಾಮಿ, ಶಾಸಕ ರಾದ ಪಿ.ಎಂ.ನರೇಂದ್ರಸ್ವಾಮಿ, ರವಿ ಕುಮಾರ್ ಗಣಿಗ, ಕೆ.ಎಂ.ಉದಯ್, ದರ್ಶನ್ ಪುಟ್ಟಣ್ಣಯ್ಯ, ರಮೇಶ್ ಬಂಡಿ ಸಿದ್ದೇಗೌಡ, ವೆಂಕಟೇಶ್, ರವಿಶಂಕರ್, ತಸ್ವೀರ್ ಸೇರ್, ದಿನೇಶ್ ಗೂಳಿಗೌಡ, ಮಾಜಿ ಸಚಿವ ವಿನಯ್‌ಕುಮಾರ್ ಸೊರಕೆ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ರಾಮಕೃಷ್ಣ, ರಾಜ್ಯ ಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್, ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಹಾಗೂ ಹಲವು ಮುಖಂಡರು ಉಪಸ್ಥಿತರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...