ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಸಂಗ್ರಹಿಸಲು ಬಿಜೆಪಿಯಿಂದ ತನಿಖಾ ಸಂಸ್ಥೆಗಳ ದುರುಪಯೋಗ: ಖರ್ಗೆ

Source: Vb | By I.G. Bhatkali | Published on 15th March 2024, 6:43 PM | National News |

ಹೊಸದಿಲ್ಲಿ: ಜಾರಿ ನಿರ್ದೇಶನಾಲಯ ಹಾಗೂ ಸಿಬಿಐಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ 400 ಕೋ.ರೂ. ಸಂಗ್ರಹಿಸಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಆರೋಪಿಸಿದ್ದಾರೆ. ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ ಖರ್ಗೆ, 45 ಕಂಪೆನಿಗಳು ತಮ್ಮ ಮೇಲೆ ದಾಳಿ ನಡೆದ ಬಳಿಕ ಚುನಾವಣಾ ಬಾಂಡ್ ಮೂಲಕ ಬಿಜೆಪಿಗೆ ದೇಣಿಗೆ ನೀಡಿವೆ ಎಂದು ಹೊಸ ತನಿಖೆ ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.

“ಇದು ಹೆಚ್ಚು ದೇಣಿಗೆ ಪಡೆಯಲು ಬ್ಲ್ಯಾಕ್ ಮೇಲ್, ಸುಲಿಗೆ, ಲೂಟಿ, ದಬ್ಬಾಳಿಕೆ ಅಲ್ಲವೇ? ಜಾರಿ ನಿರ್ದೇಶನಾಲಯ, ಸಿಬಿಐ ಹಾಗೂ ಆದಾಯ ತೆರಿಗೆ ಇಲಾಖೆ ದಾಳಿ ಬಳಿಕ ಇನ್ನೂ 15ಕ್ಕೂ ಅಧಿಕ ಕಂಪೆನಿಗಳು ಬಿಜೆಪಿಗೆ ದೇಣಿಗೆ ನೀಡಿವೆ ಎಂಬುದನ್ನು ಹೊಸ ತನಿಖೆ ಬಹಿರಂಗಪಡಿಸಿದೆ. ಒಟ್ಟು 45 ಕಂಪೆನಿಗಳು ಬಿಜೆಪಿಗೆ ಸುಮಾರು 400 ಕೋಟಿ ರೂ. ದೇಣಿಗೆ ನೀಡಿವೆ' ಎಂದು ಖರ್ಗೆ 'ಎಕ್ಸ್'ನ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.

“ವರದಿಯ ಪ್ರಕಾರ 4 ಬೇನಾಮಿ ಕಂಪೆನಿಗಳು ಕೂಡ ಬಿಜೆಪಿಗೆ ದೇಣಿಗೆ ನೀಡಿವೆ. ಸರ್ವಾಧಿಕಾರಿ ಮೋದಿ ಸರಕಾರ ಕಾಂಗ್ರೆಸ್‌ನ ಬ್ಯಾಂಕ್‌ ಖಾತೆಯನ್ನು ಸ್ತಂಭನಗೊಳಿಸಿತ್ತು. ಆದರೆ, ಅದು ಮಾತ್ರ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಹಣ ಸಂಗ್ರಹಿಸುತ್ತಿದೆ' ಎಂದು ಅವರು ಆರೋಪಿಸಿದರು.

ಬಿಜೆಪಿಗೆ ಪ್ರಜಾಪ್ರಭುತ್ವದ ಬಗ್ಗೆ ಕಾಳಜಿ ಇದ್ದರೆ, ಸ್ವತಂತ್ರ ತನಿಖೆಯ ಮೂಲಕ ತನ್ನ ಸ್ವಂತ ಹಣಕಾಸು ವ್ಯವಹಾರಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಖರ್ಗೆ ಆಗ್ರಹಿಸಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...