ಕಾರವಾರ: ಬೈಕ್ ಸ್ಕಿಡ್ ಆಗಿ ಬಿದ್ದು ಲೈನ್ ಮನ್ ಸಾವು
ಕಾರವಾರ: ಬೈಕ್ ಸ್ಕಿಡ್ ಆಗಿ ಬಿದ್ದು ಲೈನ್ ಮನ್ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಸಿದ್ದರದಲ್ಲಿ ನಡೆದಿದೆ.
ಮೂಲತಃ ವಿಜಯಪುರದ, ನಗರದಲ್ಲಿ ಹೆಸ್ಕಾಂ ಲೈನ್ ಮನ್ ಆಗಿದ್ದ ಮಲ್ಲಿಕಾರ್ಜುನ (29) ಮೃತಪಟ್ಟವರು.
ವಿದ್ಯುತ್ ದುರಸ್ತಿಗೆ ಕಾರವಾರ ಪಟ್ಟಣದಿಂದ ಸಿದ್ದರದ ಕಡೆ ಹೋಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿ ದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ರವಾನಿಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿ ದ್ದಾರೆ. ಈ ಬಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.