ನವದೆಹಲಿ: 2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಪಕ್ಷ ಸಂಘಟನೆ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮುಂದಿನ ತಿಂಗಳಿನಿಂದ 120 ದಿನಗಳ ಕಾಲ ರಾಷ್ಟ್ರದಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿಸೆಂಬರ್ ಮೊದಲ ವಾರದಿಂದ ಜೆ. ಪಿ. ನಡ್ಡಾ ಪ್ರವಾಸ ಆರಂಭಿಸಲಿದ್ದು, ಉತ್ತರ್ ಖಂಡ್ ಮೊದಲ ರಾಜ್ಯವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.
ಡಿಸೆಂಬರ್ 5ರಿಂದ ಜೆ. ಪಿ. ನಡ್ಡಾ ಪ್ರವಾಸ ಆರಂಭಿಸುವ ಸಾಧ್ಯತೆಯಿದ್ದು, ಪ್ರತಿಯೊಂದು ರಾಜ್ಯಕ್ಕೂ ಭೇಟಿ ನೀಡಿ, ಎಲ್ಲಾ ಬೂತ್ ಮಟ್ಟದ ಮುಖ್ಯಸ್ಥರೊಂದಿಗೆ ವರ್ಚುಯಲ್ ಸಭೆ ನಡೆಸಲಿದ್ದಾರೆ. ಪ್ರತಿಯೊಂದು ರಾಜ್ಯದ ಜಿಲ್ಲಾ ಮುಖ್ಯಸ್ಥರು ಸೇರಿದಂತೆ ಹಿರಿಯ ಮುಖಂಡರು ಮಾತ್ರವಲ್ಲದೇ, ಪಕ್ಷದ ಶಾಸಕರು ಹಾಗೂ ಸಂಸದರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಹೇಳಿದರು.
ಪ್ರವಾಸದ ವೇಳೆಯಲ್ಲಿ 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸದ ಲೋಕಸಭಾ ಕ್ಷೇತ್ರಗಳು ಹಾಗೂ ವಲಯಗಳಲ್ಲಿ ಪಕ್ಷ ಸಂಘಟನೆ ನಿಟ್ಟಿನಲ್ಲಿ ಪಕ್ಷದ ಮುಖಂಡರೊಂದಿಗೆ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಅವರು ತಿಳಿಸಿದರು.
ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂನಲ್ಲಿ ಚುನಾವಣೆಗಾಗಿ ಪಕ್ಷದ ಸಿದ್ಧತೆಯನ್ನು ಅವರು ಪರಿಶೀಲನೆ ನಡೆಸಲಿದ್ದಾರೆ ಎಂದು ಅರುಣ್ ಸಿಂಗ್ ಮಾಹಿತಿ ನೀಡಿದರು
Read These Next
ಜನವರಿ 26ಕ್ಕೆ ಟ್ರ್ಯಾಕ್ಟರ್ ಪರೇಡ್ ಖಚಿತ; ಶಾಂತಿಯುತವಾಗಿ ದೆಹಲಿ ರಿಂಗ್ ರೋಡ್ನಲ್ಲಿ ರ್ಯಾಲಿ
ನವದೆಹಲಿ : ದೆಹಲಿ ಪೊಲೀಸ್ನ ತಕರಾರಿನ ನಡುವೆಯೂ ದೆಹಲಿ ಗಡಿಯಲ್ಲಿ ನೆರೆದಿರುವ ರೈತರು ತಮ್ಮ ಈ ಹಿಂದಿನ ನಿರ್ಧಾರದಂತೆ ಜನವರಿ 26ರ ...
ಕೃಷಿ ನೀತಿ ವಿರೋಧಿ ಹೋರಾಟ; ಪೆರುವಿನ ರೈತರ ಹೋರಾಟಕ್ಕೆ ಗೆಲವು ಸಿಕ್ಕಂತೆ, ಭಾರತೀಯರು ರೈತರಿಗೂ ಸಿಗಬಹುದೆ?
ನವದೆಹಲಿ : ನಮ್ಮಿಂದ ಸಾಧ್ಯವಾಯಿತು! ...
ಸುಪ್ರೀಂ ಕೋರ್ಟ್ ಸಮಿತಿ ನೇಮಿಸಿದ ಸಮಿತಿಯ ಮುಂದೆ ಹೋಗುವುದಿಲ್ಲ : ರೈತ ಮುಖಂಡ ದರ್ಶನ್ ಪಾಲ್
9ನೇ ಸುತ್ತಿನ ಮಾತುಕತೆಯ ಮೂಲಕ ಕೇಂದ್ರ ಸರ್ಕಾರ ಮತ್ತು ರೈತ ಸಂಘಟನೆಗಳ ಜೊತೆಗೆ ಮಾತುಕತೆ ಮುಕ್ತಾಯಗೊಂಡಿದೆ. ಇನ್ನೇನಿದ್ದರೂ ...
ಸರ್ಕಾರ-ರೈತರ ನಡುವೆ 9ನೇ ಸುತ್ತು; ತಾನು ಬಗ್ಗದೆ, ಮೃದುವಾಗುವಂತೆ ರೈತರಿಗೆ ಆಗ್ರಹಿಸಿದ ಸರ್ಕಾರ
ನವದೆಹಲಿ : ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ 9ನೇ ಸುತ್ತಿನ ಮಾತುಕತೆಯ ನಡೆಯುವುದೋ ಇಲ್ಲವೋ ಎಂಬ ಗೊಂದಲದ ನಡುವೆಯೇ ...
ರೈತ ಹೋರಾಟವನ್ನು ಖಾಲಿಸ್ತಾನಿ ತಂತ್ರವೆಂದ ಗೋದಿ ಮೀಡಿಯಾ: ಕಿಸಾನ್ ಏಕ್ತಾ ಮೋರ್ಚಾ ಖಂಡನೆ
ನವದೆಹಲಿ : ಕಳೆದ 50ದಿನಗಳಿಂದ ನಡೆಯುತ್ತಿರುವ ಹೋರಾಟವನ್ನು ವಿವಿಧ ರೀತಿಯಲ್ಲಿ ವ್ಯಾಖ್ಯಾನಿಸುವ ಪ್ರಯತ್ನವನ್ನು ಸರ್ಕಾರ ಹಾಗೂ ...
ಸರ್ಕಾರ-ರೈತರ ನಡುವೆ 9ನೇ ಸುತ್ತಿನ ಮಾತುಕತೆ: ನಿರೀಕ್ಷೆಗಳಿಲ್ಲದ ಸಭೆ
ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ 52ನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನಗಳಲ್ಲಿ ಸರ್ಕಾರ ಮತ್ತು ರೈತರ ನಡುವೆ 8 ...