ಎಂಎಸ್‌ಪಿ ಕುರಿತು ಚರ್ಚೆಯಾಗದೆ ಪ್ರತಿಭಟನಾ ಸ್ಥಳ ತ್ಯಜಿಸಲಾರೆವು: ರಾಕೇಶ್ ಟೆಕಾಯತ್

Source: VB News | By I.G. Bhatkali | Published on 30th November 2021, 3:13 PM | National News |

ಹೊಸದಿಲ್ಲಿ: ಕನಿಷ್ಠ ಬೆಂಬಲ ಬೆಲೆ ಹಾಗೂ ಇತರ ವಿಷಯಗಳ ಕುರಿತು ಚರ್ಚೆ ನಡೆಸದೇ ಇದ್ದರೆ, ಪ್ರತಿಭಟನಾ ಸ್ಥಳವನ್ನು ರೈತರು ತ್ಯಜಿಸಲಾರರು ಎಂದು ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ನಾಯಕ ರಾಕೇಶ್ ಟಿಕಾಯತ್ ಸೋಮವಾರ ಹೇಳಿದ್ದಾರೆ.

ದೇಶದಲ್ಲಿ ಯಾವುದೇ ಪ್ರತಿಭಟನೆ ನಡೆಯಬಾರದು ಎಂದು ಕೇಂದ್ರ ಸರಕಾರ ಬಯಸುತ್ತಿದೆ. ಆದರೆ, ಇತರ ವಿಷಯಗಳು ಸೇರಿದಂತೆ ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಯಾವುದೇ ಚರ್ಚೆ ನಡೆಯದೆ ನಾವು ಪ್ರತಿಭಟನಾ ಸ್ಥಳ ತ್ಯಜಿಸಲಾರೆವು ಎಂದು ಟಿಕಾಯತ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಮಸೂದೆ-2021 ಅನ್ನು ಅಂಗೀಕರಿಸಿದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇದು ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ಸಂದರ್ಭ ಮೃತಪಟ್ಟ ಎಲ್ಲ 750 ರೈತರಿಗೆ ಸಲ್ಲಬೇಕಾದ ಗೌರವ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಇತರ ವಿಷಯಗಳು ಈಗಲೂ ಪರಿಹಾರವಾಗದೇ ಬಾಕಿ ಇರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ ಎಂದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...