ಸಾಲಭಾದೆಯಿಂದ ರೈತ ವಿಷಸೇವಿಸಿ ಆತ್ಮಹತ್ಯೆ
ಮುಂಡಗೋಡ ; ಸಾಲದಬಾದೆಯಿಂದ ರೈತನೊರ್ವ ಕ್ರೀಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಾತೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುಡಸಾಲಿ ಗ್ರಾಮದಲ್ಲಿ ನಡೆದಿದೆ ಮೃತಪಟ್ಟ ರೈತನನ್ನು ಯಲ್ಲಪ್ಪಾ ಪರಸಪ್ಪಾ ಟೊಪೋಜಿ(೬೯) ಎಂದು ತಿಳಿದು ಬಂದಿದೆ.
ಮೃತನು ಬೆಳೆಯನ್ನು ಬೆಳೆಯಲು ಬೇರೆ ಬೇರೆ ಬ್ಯಾಂಕುಗಳಲ್ಲಿ ಹಾಗೂ ಸೊಸೈಟಿಗಳಲ್ಲಿ ಸುಮಾರು ೧೬೭೦೦೦=೦೦ ಸಾವಿರ ರೂ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಸಾಲವನ್ನು ತೀರಿಸುವುದು ಹೇಗಪ್ಪಾ ಎಂದು ಚಿಂತಿಸುತ್ತಾ ಜೀವನದಲ್ಲಿ ಜೀಗುಪ್ಸೆಗೊಂಡು ರವಿವಾರ ಮನೆಯಲ್ಲಿ ಕ್ರೀಮಿನಾಶಕ ಸೇವಿಸಿ ಅಸ್ವಸ್ಥನಾಗಿದ್ದ. ತಕ್ಷಣ ಹುಬ್ಬಳ್ಳಿ ಕಿಮ್ಸಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ರೈತ ಮೃತಪಟ್ಟಿದ್ದಾನೆ. ಈ ಮೃತ ರೈತನ ಪುತ್ರ ನಾಗೇಂದ್ರ ಟೋಪೊಜಿ ಮುಂಡಗೋಡ ಪೊಲೀಸ ಠಾಣೆಯಲ್ಲಿ ದೂರ ದಾಖಲಿಸಿದ್ದಾನೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ