ರೈತ ಹೋರಾಟವನ್ನು ಖಾಲಿಸ್ತಾನಿ ತಂತ್ರವೆಂದ ಗೋದಿ ಮೀಡಿಯಾ: ಕಿಸಾನ್‌ ಏಕ್ತಾ ಮೋರ್ಚಾ ಖಂಡನೆ

Source: S O News | By Laxmi Tanaya | Published on 16th January 2021, 10:59 AM | National News | Don't Miss |

ನವದೆಹಲಿ : ಕಳೆದ 50ದಿನಗಳಿಂದ ನಡೆಯುತ್ತಿರುವ ಹೋರಾಟವನ್ನು ವಿವಿಧ ರೀತಿಯಲ್ಲಿ ವ್ಯಾಖ್ಯಾನಿಸುವ ಪ್ರಯತ್ನವನ್ನು ಸರ್ಕಾರ ಹಾಗೂ ಮಾಧ್ಯಮಗಳನ್ನು ಮಾಡುತ್ತಲೇ ಬಂದಿವೆ. ಇದೇ ಕಾರಣಕ್ಕೆ ಹೋರಾಟ ನಿರತ ರೈತರು ಕೆಲವು ಮಾಧ್ಯಮ ಸಂಸ್ಥೆಗಳನ್ನು, ಗೋದಿ ಮೀಡಿಯಾ ಎಂದು ಟೀಕಿಸಿ ಅವುಗಳಿಗೆ ಪ್ರತಿಕ್ರಿಯಿಸುವುದನ್ನು ನಿರಾಕರಿಸಿದ್ದವು. 

ಜ. 15ರಂದು ಕೆಲವು ಮಾಧ್ಯಮವರು '‌, ರೈತ ಹೋರಾಟ; ಖಾಲಿಸ್ತಾನದ ಯೋಜನೆ' ಎಂಬ ಕಾರ್ಯಕ್ರಮವೊಂದನ್ನು ಪ್ರಸಾರ ಮಾಡುವ ಮೂಲಕ ತೀವ್ರವಾದ ಟೀಕೆಗೆ ಗುರಿಯಾಗಿದೆ. 

ಕಿಸಾನ್‌ ಏಕ್ತಾ ಮೋರ್ಚಾದ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಭ್ರಷ್ಟ ಹಾಗೂ ವಿಷಯ ಹರಡುವ ಪತ್ರಿಕೋದ್ಯಮದಿಂದ ಎಚ್ಚರವಾಗಿರಿ, ಗೋದಿ ಮೀಡಿಯಾದ ಪಕ್ಷಪಾತ ಎಲ್ಲರಿಗೂ ತಿಳಿದಿರುವುದೇ ಎಂದು ಪ್ರತಿಕ್ರಿಯಿಸಿದೆ.

ಕೆಲವು ಪತ್ರಿಕೆಯಲ್ಲಿ ವಿಶ್ಲೇಷಣೆಗಳೆರಡು ಹೋರಾಟವನ್ನು ತಪ್ಪಾಗಿ ವ್ಯಾಖ್ಯಾನಿಸುವ ಪ್ರಯತ್ನ ಎಂದು ರೈತ ನಾಯಕರು ಗೋದಿ ಮೀಡಿಯಾ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...