ನವದೆಹಲಿ : ಕಳೆದ 50ದಿನಗಳಿಂದ ನಡೆಯುತ್ತಿರುವ ಹೋರಾಟವನ್ನು ವಿವಿಧ ರೀತಿಯಲ್ಲಿ ವ್ಯಾಖ್ಯಾನಿಸುವ ಪ್ರಯತ್ನವನ್ನು ಸರ್ಕಾರ ಹಾಗೂ ಮಾಧ್ಯಮಗಳನ್ನು ಮಾಡುತ್ತಲೇ ಬಂದಿವೆ. ಇದೇ ಕಾರಣಕ್ಕೆ ಹೋರಾಟ ನಿರತ ರೈತರು ಕೆಲವು ಮಾಧ್ಯಮ ಸಂಸ್ಥೆಗಳನ್ನು, ಗೋದಿ ಮೀಡಿಯಾ ಎಂದು ಟೀಕಿಸಿ ಅವುಗಳಿಗೆ ಪ್ರತಿಕ್ರಿಯಿಸುವುದನ್ನು ನಿರಾಕರಿಸಿದ್ದವು.
ಜ. 15ರಂದು ಕೆಲವು ಮಾಧ್ಯಮವರು ', ರೈತ ಹೋರಾಟ; ಖಾಲಿಸ್ತಾನದ ಯೋಜನೆ' ಎಂಬ ಕಾರ್ಯಕ್ರಮವೊಂದನ್ನು ಪ್ರಸಾರ ಮಾಡುವ ಮೂಲಕ ತೀವ್ರವಾದ ಟೀಕೆಗೆ ಗುರಿಯಾಗಿದೆ.
ಕಿಸಾನ್ ಏಕ್ತಾ ಮೋರ್ಚಾದ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಭ್ರಷ್ಟ ಹಾಗೂ ವಿಷಯ ಹರಡುವ ಪತ್ರಿಕೋದ್ಯಮದಿಂದ ಎಚ್ಚರವಾಗಿರಿ, ಗೋದಿ ಮೀಡಿಯಾದ ಪಕ್ಷಪಾತ ಎಲ್ಲರಿಗೂ ತಿಳಿದಿರುವುದೇ ಎಂದು ಪ್ರತಿಕ್ರಿಯಿಸಿದೆ.
ಕೆಲವು ಪತ್ರಿಕೆಯಲ್ಲಿ ವಿಶ್ಲೇಷಣೆಗಳೆರಡು ಹೋರಾಟವನ್ನು ತಪ್ಪಾಗಿ ವ್ಯಾಖ್ಯಾನಿಸುವ ಪ್ರಯತ್ನ ಎಂದು ರೈತ ನಾಯಕರು ಗೋದಿ ಮೀಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.